ಮೊಟ್ಟೆ ಸರಬರಾಜು ಟೆಂಡರ್ ಪ್ರಕ್ರಿಯೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹಸ್ತಕ್ಷೇಪ ನಡೆಸಲು ಒಪ್ಪಿಕೊಂಡು, ಮಾಸಿಕ ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟಿರುವುದು ಟಿವಿ ಮಾಧ್ಯಮವೊಂದರ ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗ ಗೊಂಡಿದ್ದು ಆ ನೆಲೆಯಲ್ಲಿ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸೂಕ್ತ ತನಿಖೆಗೆ ಅವಕಾಶ ಮಾಡಿಕೊಡ ಬೇಕು.
ಒರ್ವ ಮಹಿಳಾ ಸಚಿವೆಯಾಗಿ ಬಡ ಗರ್ಭಿಣಿ ಮಹಿಳೆಯರಿಗಾಗಿ ಸರ್ಕಾರ ನೀಡುವ ಮೊಟ್ಟೆಯಲ್ಲಿ ಕೂಡ ಸಚಿವೆ ಕಮೀಷನ್ ಪಡೆಯುತ್ತಿರುವುದು ನಾಚಿಕೆಗೇಡು. ದಿನಕ್ಕೊಂದು ಹಗರಣಗಳಲ್ಲಿ ತೊಡಗಿರುವ ಬಿಜೆಪಿ ನೇತೃತ್ವದ ರಾಜ್ಯ ಸರಕಾರದಿಂದ ಇನ್ನೊಂದು ಹಗರಣ ಬಯಲಾಗಿದೆ. ಮಾಜಿ ಮುಖ್ಯ ಮಂತ್ರಿ ಸಿದ್ಧರಾಮಯ್ಯನವರ ಆಡಳಿತದ ಅವದಿಯಲ್ಲಿ ಜಾರಿಗೆ ಬಂದಿದ್ದ ಈ ಜನಪರ ಯೋಜನೆಯಡಿಯಲ್ಲಿ ಅಂಗನವಾಡಿಗಳ ಮೂಲಕ ಹಾಲಿನೊಂದಿಗೆ ಮೊಟ್ಟೆಯನ್ನು ನೀಡಲಾಗುತ್ತಿತ್ತು.