ಗೃಹಲಕ್ಷ್ಮೀ ಯೋಜನೆಗೆ ಜೂ.16, ಶುಕ್ರವಾರದದಿಂದಲೇ ಅರ್ಜಿ ಸಲ್ಲಿಕೆ~ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಮನೆ ಯಜಮಾನಿಗೆ 2000 ರೂ ನೀಡುವ ಗೃಹಲಕ್ಷ್ಮೀ ಯೋಜನೆಗೆ  ನಾಳೆಯಿಂದ ಅಂದರೆ ಜೂನ್ 16ರಿಂದ ಆನ್ಲೈನ್, ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರು ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. 

ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್ ಮಾಹಿತಿ ನೀಡಬೇಕು. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ನಾಳೆ ಶಕ್ತಿ ಭವನದಲ್ಲಿ ಸಿದ್ದರಾಮಯ್ಯನವರಿಂದ ಸೇವಾ ಸಿಂಧು ವೆಬ್ ಲಾಂಚ್ ಆಗಲಿದ್ದು, ನಾಳೆ ಮಧ್ಯಾಹ್ನ 1.30ರಿಂದ ಅರ್ಜಿ ಸಲ್ಲಿಕೆ ಮಾಡಬಬಹುದು. ‘ಗೃಹಲಕ್ಷ್ಮೀ’ಯೋಜನೆಗೆ ವಾರ್ಷಿಕ ಅಂದಾಜು 30 ಸಾವಿರ ಕೋಟಿ ವೆಚ್ಚ ನಿರೀಕ್ಷೆ ಇದ್ದು, ಆಗಸ್ಟ್ 18ರಂದು ಬೆಳಗಾವಿ ಅಥವಾ ಹುಬ್ಬಳ್ಳಿಯಲ್ಲಿ ‘ಗೃಹಲಕ್ಷ್ಮೀ’ಗೆ ಸಿಎಂ  ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಯೋಜನೆಗೆ ತೆರಿಗೆ ಕಟ್ಟುವವರು ಅರ್ಜಿ ಸಲ್ಲಿಸಿದರೆ ಅದು ರಿಜೆಕ್ಟ್ ಆಗಲಿದೆ. ಇ ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಅರ್ಜಿದಾರರ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ದರೆ ಅರ್ಜಿ ಸ್ವೀಕಾರ ಆಗವುದಿಲ್ಲ. ಆದ್ದರಿಂದ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

 ಪ್ರಮುಖ ಅಂಶಗಳು: ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿಗಳನ್ನು ಆನ್ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್. ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ (https://sevasindhugs.karnataka.gov.in/gruhalakshmi)

ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿರುತ್ತದೆ.

ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿದ್ದು, ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.

 
 
 
 
 
 
 
 
 
 
 

Leave a Reply