ಎಚ್ಎಎಲ್ ವಿಮಾನ ನಿಲ್ದಾಣದಿಂದ ಮುಳಬಾಗಿಲಿಗೆ ಹೊರಟಿದ್ದರು. ಈ ವೇಳೆಯಲ್ಲಿ ಹೊಸಕೋಟೆಯ ಬಳಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಒಮ್ಮೆಲೆ ರಣಹದ್ದುಗಳು ಅಡ್ಡ ಬಂದಿವೆ.
ಎರಡು ರಣಹದ್ದುಗಳನ್ನು ಫೈಲೆಟ್ ತಪ್ಪಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತುರ್ತು ಭೂಸ್ಪರ್ಶವಾಗಿದೆ. ಬೆಂಗಳೂರಿನ ಎಚ್ಎಎಲ್ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆಯಲ್ಲಿ ರಣಹದ್ದು ಹೆಲಿಕಾಫ್ಟರ್ ಗಾಜಿಗೆ ಬಡಿದಿದೆ.
ಇದರಿಂದಾಗಿ ಗಾಜು ಒಡೆದು ಹೋಗಿದ್ದು, ಫೈಲೆಟ್ ಸಮಯ ಪ್ರಜ್ಞೆಯಿಂದ ಹೆಲಿಕಾಫ್ಟರ್ ಅನ್ನು ತುರ್ತು ಭೂಸ್ಪರ್ಶ ಮಾಡಿದ್ದಾರೆ. ಈ ವೇಳೆಯಲ್ಲಿ ಡಿಕೆ ಶಿವಕುಮಾರ್ ಅವರು ವರದಿಗಾರರಿಗೆ ಸಂದರ್ಶನವನ್ನು ನೀಡುತ್ತಿದ್ದರು ಎಂದು ತಿಳಿದು ಬಂದಿದೆ.