ಉಡುಪಿ: ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ 130ರಿಂದ 136 ಸೀಟು ಕಾಂಗ್ರೆಸ್ ಗೆ ಬಂದಲ್ಲಿ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಉರುಳು ಸೇವೆ ಮಾಡುವುದಾಗಿ ಹರಕೆ ಹೊತ್ತುಕೊಂಡಿದ್ದ ಸಮಾಜಸೇವಕ, ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಶುಕ್ರವಾರ ಉರುಳು ಸೇವೆ ಸಲ್ಲಿಸುವ ಮೂಲಕ ಹರಕೆ ಸಂದಾಯ ಮಾಡಿದರು.
ಶ್ರೀದೇವಿಗೆ ಪ್ರಿಯವಾದ ಮಲ್ಲಿಗೆಯ ಹೂವಿನ ಪೂಜೆಯನ್ನೂ ನೆರವೇರಿಸಿದರು. ಸಂದರ್ಭದಲ್ಲಿ ಕೃಷ್ಣಮೂರ್ತಿ ಆಚಾರ್ಯರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು
ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಕಿನ್ನಿಮೂಲ್ಕಿ ಸರ್ಕಲ್ ನಲ್ಲಿ ಸಂಭ್ರಮಾಚರಣೆ ನಡೆಸಲಾಗುವುದು ಎಂದು ಕೃಷ್ಣಮೂರ್ತಿ ಆಚಾರ್ಯ ತಿಳಿಸಿದ್ದಾರೆ.