ನಿರಂತರ ಸೋಲಿನಿಂದ ಕಂಗೆಟ್ಟು ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮಾಜಿ ಸಿ.ಎಂ. ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಒಬ್ಬ ಗೋಮುಖ ವ್ಯಾಘ್ರ ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಕಾಂಗ್ರೆಸಿನ ನಿರಂತರ ಸೋಲಿನಿಂದ ಕಂಗೆಟ್ಟು ತನ್ನ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ದೇಶದ ಪ್ರಧಾನಿಗೆ ಗೌರವ ನೀಡದ ಸಿದ್ಧರಾಮಯ್ಯ ತನ್ನ ಅಧಿಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅದೆಷ್ಟು ಹಿಂದೂಗಳ ಸರಣಿ ಹತ್ಯೆ ನಡೆದಿದೆ ಎಂಬುದನ್ನು ಒಮ್ಮೆ ಅವಲೋಕಿಸಿದರೆ ಯಾರು ಗೋಮುಖ ವ್ಯಾಘ್ರ ಎಂಬುದನ್ನು ತಿಳಿಯಲು ಸಾಧ್ಯ.

ಬಾಯ್ತೆರೆದರೆ ಕೋಮುವಾದ ಎಂಬಿತ್ಯಾದಿ ಸದಾ ವಿವಾದಿತ ಹೇಳಿಕೆಗಳನ್ನು ನೀಡುತ್ತಾ, ಧರ್ಮ-ಜಾತಿಗಳನ್ನು ಒಡೆಯುತ್ತಾ, ಒಂದೇ ವರ್ಗದ ಓಲೈಕೆ ಮಾಡುತ್ತಿರುವ ಸಿದ್ದರಾಮಯ್ಯಗೆ ದೇಶದ ಪ್ರಧಾನಿ ಮತ್ತು ಜಾತ್ಯಾತೀತ ತೆಯ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕುಯಿಲಾಡಿ ಹೇಳಿದ್ದಾರೆ.

ದೇಶದ ಸ್ವಾತಂತ್ರ್ಯಾ ನಂತರ ಕಾಂಗ್ರೆಸನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾ ಗಾಂಧಿ ಮಾತನ್ನೇ ಈಡೇರಿ ಸದ ಕಾಂಗ್ರೆಸ್ ಪಕ್ಷ ಇಂದು ತನ್ನ ದೇಶ ವಿರೋಧಿ ನೀತಿಯಿಂದಾಗಿ ಅಧಪತನದತ್ತ ಸಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ವಿಚಾರದಲ್ಲೂ ರಾಜಕೀಯ ಮಾಡುತ್ತಿರುವ ಕೀಳು ಮನಸ್ಥಿತಿಯ ಸಿದ್ಧರಾಮಯ್ಯ ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮರನ್ನು ಅವಮಾನಿಸಿದಂತಾಗಿದೆ.

ಸುಪ್ರೀಂ ಕೋರ್ಟಿನ ತೀರ್ಪಿನ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ ಮಂದಿರದ ದೇಣಿಗೆ ಸಂಗ್ರಹದ ಬಗ್ಗೆಯೂ ಅಪಸ್ವರ ಎತ್ತಿರುವ ಸಿದ್ಧರಾಮಯ್ಯ ವರ್ತನೆ ಹಿಂದೂ ವಿರೋಧಿ ನೀತಿಗೆ ಜ್ವಲಂತ ಉದಾಹರಣೆ. ಹೆಸರಲ್ಲಿ ರಾಮ ಎಂಬ ಪದ ಇರುವ ಮಾತ್ರಕ್ಕೆ ಹಿಂದೂ ವಿರೋಧಿಯೊಬ್ಬ ರಾಮಭಕ್ತನಾಗಲು ಸಾಧ್ಯವೇ ಎಂದು ಕುಯಿಲಾಡಿ ಪ್ರಶ್ನಿಸಿದ್ದಾರೆ.

 
 
 
 
 
 
 
 
 
 
 

Leave a Reply