ಆಸ್ಕರ್ ಫರ್ನಾಂಡೀಸ್ ಆರೋಗ್ಯ ಚೇತರಿಕೆಗಾಗಿ ವಿಶೇಷ ಪ್ರಾರ್ಥನೆ

ಕುಂದಾಪುರ : ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿರುವ ಪಕ್ಷದ ಹಿರಿಯ ನಾಯಕ , ಕೇಂದ್ರ ಸರಕಾರದ ಮಾಜಿ ಸಚಿವರ ಆಸ್ಕರ್ ಫರ್ನಾಂಡೀಸ್ ಆರೋಗ್ಯ ಚೇತರಿಕೆಗಾಗಿ , ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಹಿರಿಯ ನಾಯಕರ ಉಪಸ್ಥಿತಿಯಲ್ಲಿ ಜು.27 ರಂದು ಉಪ್ಪೂರು ಮಹತೋಭಾರ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ಸಂಕಷ್ಟಿಯ ವಿಶೇಷ ಸಂದರ್ಭದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು , ಬ್ಲಾಕ್ ಅಧ್ಯಕ್ಷ ದಿನಕರ್ ಹೇರೂರ್ , ಸತೀಶ್ ಅಮೀನ್ ಪಡುಕೆರೆ , ಬಿ. ಭುಜಂಗ ಶೆಟ್ಟಿ , ಜನಾರ್ದನ ತೋನ್ಸೆ , ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ನಿತ್ಯಾನಂದ ಶೆಟ್ಟಿ ಹಾರಾಡಿ, ಪ್ರಖ್ಯಾತ್ ಶೆಟ್ಟಿ ,ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹರೀಶ್ ಕಿಣಿ ಅಲೆವೂರು, ಹಾರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಭಾಕರ ಶೆಟ್ಟಿ ,ಹಾಗೂ ಬ್ರಹ್ಮಾವರ ಬ್ಲಾಕ್ ನ ಪದಾಧಿಕಾರಿಗಳು , ಉಡುಪಿ ಬ್ಲಾಕ್ ನ ಸದಾಶಿವ ಕಟ್ಟೆಗುಡ್ಡೆ ,ಗಣೇಶ್ ನೆರ್ಗಿ ,ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply