ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ಯಡಿಯೂರಪ್ಪ ಭೇಟಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತೆರಳಿದ್ದಾರೆ. ಈ ವೇಳೆ ಅವರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ಮಾತುಕತೆ ನಡೆದಿರುವುದು ಎಲ್ಲೆಡೆ ಕುತೂಹಲ ಮೂಡಿಸಿದೆ.

ಪ್ರಧಾನಿ ಮತ್ತು ಯಡಿಯೂರಪ್ಪ ನಡುವೆ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆದಿದ್ದು, ಯಾವೆಲ್ಲಾ ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ ಎಂಬುದು ಇನ್ನು ತಿಳಿದಿಲ್ಲ.

ಈ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಒಟ್ಟು ಒಂಬತ್ತು ರಾಜ್ಯಗಳ ವಿಧಾನಸಭಾ ಚುನಾವಣಾ ಕಾರ್ಯತಂತ್ರವು ನವದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಾರ್ಯಕಾರಿ ಸಭೆಯ ಪ್ರಮುಖ ಕಾರ್ಯಸೂಚಿಯಾಗಿದೆ.

 
 
 
 
 
 
 
 
 
 
 

Leave a Reply