ಪಟ್ಟಣ ಪಂಚಾಯತ್ ಸದಸ್ಯರ ಸಮಾವೇಶ ಉದ್ದೇಶಿಸಿ ಸಚಿವೆ, ಶೋಭಾ ಕರಂದ್ಲಾಜೆ ಭಾಷಣ

ತರಿಕೇರೆ: ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆ ಇಂದು ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಸದಸ್ಯರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. 

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಮೊದಲ ಪ್ರಾಶಸ್ಥ್ಯದ ಮತದ ಮೂಲಕ, ಅತ್ಯಧಿಕ ಮತಗಳಿಂದ ಗೆಲ್ಲಿಸಿ, ರಾಜ್ಯದ ಅಭಿವೃದ್ಧಿ ಕಾರ್ಯದಲ್ಲಿ ಭಾಗಿಯಾಗುವಂತೆ ಕರೆ ನೀಡಿದರು. 

ಮಾಜಿ ಮುಖ್ಯಮಂತ್ರಿ,ಶ್ರೀ ಬಿ ಎಸ್ ಯಡಿಯೂರಪ್ಪ, ಅಭ್ಯರ್ಥಿ ಎಂ. ಕೆ ಪ್ರಾಣೇಶ್, ಸ್ಥಳೀಯ ಶಾಸಕ ಡಿ. ಎಸ್ ಸುರೇಶ್, ಮೂಡಿಗೆರೆ ಶಾಸಕ ಕುಮಾರಸ್ವಾಮಿ, ಮಾಜಿ ಶಾಸಕ ಡಿ. ಎನ್ ಜೀವರಾಜ್ ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply