ರಂಗ ಕಲೆ ಮತ್ತು ವೇದಿಕೆ ನಿರ್ವಹಣೆ – ಪಿಪಿಸಿಯಲ್ಲಿ ತರಬೇತಿ ಕಾರ್ಯಗಾರ

ವೇದಿಕೆ ನಿರ್ವಹಣೆ ಒಂದು ಕಲೆ. ಆ ಕಲೆಯನ್ನು ಕರಗತ ಮಾಡಿಕೊಂಡರೆ ವೇದಿಕೆಯನ್ನು ಸಮರ್ಥವಾಗಿ ನಿರ್ವಹಣೆ ಮಾಡುವುದು ಸುಲಭ ಸಾಧ್ಯ ಎಂದು ಅಂತರಾಷ್ಟ್ರೀಯ ಖ್ಯಾತಿಯ ಗಿಲಿ ಗಿಲಿ ಮ್ಯಾಜಿಕ್, ಉಡುಪಿಯ ಶ್ರೀ ತೇಜಸ್ವಿ ಶಂಕರ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜು, ಉಡುಪಿಯಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಘಟಕದ ಮಾರ್ಗದರ್ಶನದಲ್ಲಿ ಪೂರ್ಣಪ್ರಜ್ಞ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ವಿದ್ಯಾರ್ಥಿ ತರಬೇತಿ ಘಟಕಗಳ ಜಂಟಿ ಆಶ್ರಯದಲ್ಲಿ ನಡೆದ “ಸ್ಟೇಜ್ ಕ್ರಾಫ್ಟ್ -ವೇದಿಕೆ ನಿರ್ವಹಣೆ” ಎನ್ನುವ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶ್ರೀ ತೇಜಸ್ವಿ ಶಂಕರ್ ರವರು ವೇದಿಕೆಯನ್ನು ಬಳಸಿಕೊಳ್ಳಬಹುದಾದ ವಿಧಾನಗಳು, ನಿಯಂತ್ರಣ, ಪರಿಕರಗಳ ಸಮರ್ಪಕ ಬಳಕೆ, ದ್ವನಿವರ್ಧಕಗಳ ನಿರ್ವಹಣೆ, ಬೆಳಕಿನ ಗುಣಮಟ್ಟ ನಿರ್ವಹಣೆ, ತಂತ್ರಜ್ಞಾನ ಮುಂತಾದ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಗಳ ಮೂಲಕ ಮಾರ್ಗದರ್ಶನ ನೀಡಿದರು.
ಕಾರ್ಯಾಗಾರದಲ್ಲಿ ಅತಿಥಿಯಾಗಿ ಭಾಗವಹಿಸಿದ ಪೂರ್ಣಪ್ರಜ್ಞ ಹಳೆ ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷರಾದ ಡಾ. ಎಂ. ಆರ್. ಹೆಗಡೆ ಇವರು ಕಾರ್ಯಾಗಾರದ ಅಗತ್ಯ ಹಾಗೂ ಉಪಯೋಗಗಳನ್ನು ವಿವರಿಸಿ ಸಮರ್ಪಕವಾಗಿ ವೇದಿಕೆಯನ್ನು ಬಳಸಲು ಕೆಲವೊಂದು ಸಲಹೆಗಳನ್ನು ನೀಡಿದರು.
ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ವಸಂತ ರವಿಪ್ರಕಾಶ್, ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕರಾದ ಡಾ. ವಿನಯ್ ಕುಮಾರ್, ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಸಂಯೋಜಕರಾದ ಡಾ.ಮಹೇಶ್ ಭಟ್, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಶ್ರೀಮತಿ ಸೌಮ್ಯ ಶೆಟ್ಟಿ, ವಿದ್ಯಾರ್ಥಿ ತರಬೇತಿ ಘಟಕದ ಸಂಯೋಜಕಿ ಶ್ರೀಮತಿ ಜಯಲಕ್ಷ್ಮಿ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಕಾಲೇಜು ಉಪನ್ಯಾಸಕರುಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ಅಂಶು ಸ್ವಾಗತಿಸಿ, ಕುಮಾರಿ ರಿಕಿತಾ ವಂದಿಸಿದರು. ಕುಮಾರಿ ಭಾಗ್ಯಶ್ರೀ ಸೇರಿಗಾರ್
ಕಾರ್ಯಕ್ರಮ ನಿರ್ವಹಿಸಿದರು.
 
 
 
 
 
 
 
 
 
 
 

Leave a Reply