ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಟಿಕೆಟ್ಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ತೀವ್ರ ಪೈಪೋಟಿ ನಡೆಯುತ್ತಿದೆ. ಬಿಜೆಪಿಯಲ್ಲಿ ಮಾಜಿ ಸಚಿವ, ಪ್ರಮೋದ್ ಮಧ್ವರಾಜ್ ಪರ ಟಿಕೆಟ್ ಗಾಗಿ ಭಾರೀ ಜನಾಂದೋಲನ ನಡೆಯುತ್ತಿದೆ.
ಕೆಲವು ದಿನಗಳ ಹಿಂದೆ ಪ್ರಮೋದ್ ಪರ ಮೀನುಗಾರ ಸಂಘಟನೆಗಳು ಸುದ್ದಿಗೋಷ್ಠಿ ನಡೆಸಿ ಮೀನುಗಾರ ಮುಖಂಡ ಪ್ರಮೋದ್ ಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದವು.
ಇಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಮದ್ವರಾಜ್, ಮೀನುಗಾರ ಸಮುದಾಯಕ್ಕೆ ನಾನು ಮತ್ತು ನನ್ನ ತಂದೆ ತಾಯಿ ನೀಡಿರುವ ಸೇವೆ ಪರಿಗಣಿಸಿ ನನಗೆ ಟಿಕೆಟ್ ಕೊಡಬೇಕು ಎಂದು ಕೇಳಿದ್ದೇನೆ.
ಮೀನುಗಾರರ ಸಮಸ್ಯೆಗಳನ್ನು ಲೋಕಸಭೆಯಲ್ಲಿ ಸಮರ್ಥವಾಗಿ ಮಂಡಿಸುವ ಅನುಭವ ಜನಪ್ರತಿನಿಧಿ ಆದವರಿಗೆ ಬೇಕಾಗುತ್ತದೆ. ಅದು ನನ್ನ ಬಳಿ ಇದೆ. ಈ ಹಿನ್ನೆಲೆಯಲ್ಲಿ ಜನಬೆಂಬಲವೂ ನನಗಿದ್ದು ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.