ನವದೆಹಲಿ: ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಆಗಿರುವ ಜಾರ್ಖಂಡ್ನ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರು ಇಂದು ನಾಮಪತ್ರ ಸಲ್ಲಿಸಿದರು.
ರಾಷ್ಟ್ರಪತಿ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಚಟುವಟಿಕೆಗಳೂ ಗರಿಗೆದರಿವೆ. ಈ ನಡುವೆ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ಮತ್ತು ಜಾಖರ್ಂಡ್ನ ಮಾಜಿ ರಾಜ್ಯಪಾಲ ದ್ರೌಪದಿ ಮುರ್ಮು ಇಂದು 12 ಗಂಟೆಗೆ ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.