ಪುದುಚೇರಿ ಸರ್ಕಾರ ಪತನ~ಸಿಎಂ ವಿ. ನಾರಾಯಣಸ್ವಾಮಿ ರಾಜೀನಾಮೆ

ಸದನದಲ್ಲಿ ಪುದುಚೆರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಸೋಮವಾರ ವಿಶ್ವಾಸ ಮತವನ್ನು ಪಡೆಯುವಲ್ಲಿ ವಿಫವಾದ ಹಿನ್ನಲೆಯಲ್ಲಿ ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿಯವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ತಮಿಳಿಸಾಯಿ ಸೌಂದರರಾಜನ್ ರವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ನೀಡಿದರು.

ಕಿರಣ್ ಬೇಡಿ ಮತ್ತು ಕೇಂದ್ರ ಸರ್ಕಾರ ವಿರೋಧ ಪಕ್ಷದ ಜೊತೆಗೆ ಸೇರಿಕೊಂಡು ಸರ್ಕಾರವನ್ನು ಪತನಗೊಳಿಸಲು ಷಡ್ಯಂತ್ರ ರೂಪಿಸಿದ್ದರು ಎಂದು ನಿರ್ಗಮನ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರುಗಳಾದ ಎ. ಜಾನ್ ಕುಮಾರ್, ಲಕ್ಷ್ಮೀನಾರಾಯಣ ಹಾಗೂ ಡಿಎಂಕೆ ಶಾಸಕ ಕೆ. ವೆಂಕಟೇಸನ್ ರಾಜೀನಾಮೆ ಹಿನ್ನಲೆಯಲ್ಲಿ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸುವ ಅಗ್ನಿ ಪರೀಕ್ಷೆ ಎದುರಾಗಿತ್ತು.

 
 
 
 
 
 
 
 
 
 
 

Leave a Reply