ಕೇರಳದ ಚಾತನೂರ್ ವಿಧಾನಸಭಾ ಕ್ಷೇತ್ರದಾದ್ಯಂತ ಶಾಸಕ ರಘುಪತಿ ಭಟ್ ಚುನಾವಣಾ ಪ್ರಚಾರ

ಕೇರಳ: ಕೇರಳದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ಸಂಬಂಧ ಶನಿವಾರದಂದು ಕೊಲ್ಲಂ ಜಿಲ್ಲೆಯ ಚಾತನೂರ್ ವಿಧಾನಸಭಾ ಕ್ಷೇತ್ರದಾದ್ಯಂತ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು.

ಮನೆ, ಅಂಗಡಿ ಮುಂಗಟ್ಟುಗಳು, ಸಾರ್ವಜನಿಕ ಸ್ಥಳಗಳಲ್ಲಿ ಮತದಾರರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಜನಪರ ಯೋಜನೆಗಳು ವಿವಿಧ ಕಾರ್ಯಕ್ರಮಗಳ ಬಗ್ಗೆ ಮನವರಿಕೆ ಮಾಡಿದರು. ಪ್ರಧಾನಿ ಮೋದಿಯ ಸಮರ್ಥ ನಾಯಕತ್ವ ಭಾರತವನ್ನು ವಿಶ್ವಗುರುವನ್ನಾಗಿಸುತ್ತಿದೆ, ಬಿಜೆಪಿ ಪಕ್ಷಕ್ಕೆ ಮತ ನೀಡುವ ಮೂಲಕ ಮೋದಿಯವರನ್ನು ಬೆಂಬಲಿಸಬೇಕು. ಕೇರಳದಲ್ಲಿ ಪ್ರಸ್ತುತ ಅಧಿಕಾರದಲ್ಲಿ ಇದ್ದ ಸಿಪಿಐಎಂ ಸರ್ಕಾರ ಅಭಿವೃದ್ಧಿಗೆ ಮಾರಕವಾಗಿ ಗೂಂಡಾ ಸಂಸ್ಕೃತಿಯಿಂದ ಜನರಲ್ಲಿ ಭೀತಿ ಹುಟ್ಟಿಸುವ ಕೆಲಸವಾಗುತ್ತಿದೆ. ಜನ ಸಾಮಾನ್ಯರು ನಿರ್ಭೀತಿಯಿಂದ ಇದ್ದು ಕೇರಳದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಗೆ ಮತ ನೀಡುವಂತೆ ವಿನಂತಿ ಮಾಡಿಕೊಂಡರು.ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು.

 
 
 
 
 
 
 
 
 

Leave a Reply