ದೆಹಲಿಯಲ್ಲಿ ಪ್ರಹ್ಲಾದ್ ಜೋಷಿ ಭೇಟಿ ಮಾಡಿದ್ಯಾಕೆ ರೇಣುಕಾಚಾರ್ಯ ?

 ನವದೆಹಲಿ:ಯಾರು ದೆಹಲಿಗೆ ಹೋಗುವುದು ಬೇಡ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದರೂ ದೆಹಲಿಗೆ ತೆರಳಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಕೇಂದ್ರದ ವರಿಷ್ಠರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ರೇಣುಕಾಚಾರ್ಯ ಮಾತನಾಡಿ ನನ್ನ ಸಿಡಿ ಇದೆ ಎಂಬ ಮಾತು ಕೇಳಿ ಬರುತ್ತಿರುವುದು ಶಾಕ್ ಆಗಿದೆ. ನಾನು ಯಾವುದಕ್ಕೂ ಕೇರ್ ಮಾಡಲ್ಲ. ದೆಹಲಿಗೆ ಬಂದಿರುವುದು ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ. ರಾಜಕೀಯ ಮಾಡಲು ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಇಂದು ದೆಹಲಿಯಲ್ಲಿ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಹೊನ್ನಾಳಿ- ನ್ಯಾಮತಿ ತಾಲ್ಲೂಕಿನಲ್ಲಿ 400 ಕೋಟಿ ರೂ ವೆಚ್ಚದ ಹನಿ ನೀರಾವರಿ ಯೋಜನೆಗಳು ಹಾಗೂ 500 ಕೋಟಿ ವೆಚ್ಚದ ರಸ್ತೆಗಳು ಮತ್ತು ರಾಂಪುರ-ಗೋವಿನಕೋವಿ ಸೇತುವೆಗಳು ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿಸಲು ಸಚಿವರಲ್ಲಿ ಮನವಿ ಮಾಡಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ರೇಣುಕಾಚಾರ್ಯ ಚರ್ಚಿಸಿದರು.

 
 
 
 
 
 
 
 
 
 
 

Leave a Reply