ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಮೂರನೇ ಬಾರಿ ಸ್ಪರ್ಧಿಸುವುದಾಗಿ ನಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿರುವ ಬೆನ್ನಲ್ಲೇ ‘ಗೋಬ್ಯಾಕ್ ಶೋಭಾ ಪತ್ರ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರು ಆರಂಭಿಸಿದ್ದಾರೆ. ಚಿಕ್ಕಮಗಳೂರು ನಗರದ ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡುವ ಮೂಲಕ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಕೆಲ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಚಿಕ್ಕಮಗಳೂರು ನಗರದ ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡುವ ಮೂಲಕ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಕೆಲ ಕಾರ್ಯಕರ್ತರು ಒತ್ತಾಯಿಸಿದ್ದಾರೆ. 5000ಕ್ಕೂ ಹೆಚ್ಚು ಪತ್ರ ಗಳನ್ನ ಕಳುಹಿಸಿ ರಾಷ್ಟ್ರ ನಾಯಕರಿಗೆ ಮನವಿ ಹಾಗು ಮಾಹಿತಿ ರವಾನಿಸಿದ್ದಾರೆ ಎಂದು ವರದಿಯಾಗಿದೆ.
ಕಾರ್ಯಕರ್ತರೇ ಈ ನಡುವೆ ಶೋಭಾ ಕರಂದ್ಲಾಜೆ ವಿರುದ್ಧ ಹೈಕಮಾಂಡ್ ಪತ್ರ ರವಾನಿಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.