ಪಂಜಾಬ್ :ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಬಳಿಯಲ್ಲಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲ್ ಮಾಹಿತಿ ನೀಡಿದ್ದಾರೆ.
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಪ್ರದರ್ಶನ ತೋರಿದ್ದ ಕಾಂಗ್ರೆಸ್ ಕೇವಲ 18 ಸ್ಥಾನಗಳಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಆಮ್ ಆದ್ಮಿ ಪಕ್ಷವು 92 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.
ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಅಮೃತ್ಸರ ಪೂರ್ವ ಕ್ಷೇತ್ರದಲ್ಲಿ ಆಪ್ ಅಭ್ಯರ್ಥಿ ಎದುರು ಸೋತಿದ್ದರು.
ಕೇವಲ ಪಂಜಾಬ್ ಮಾತ್ರವಲ್ಲದೇ ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ ಹಾಗೂ ಮಣಿಪುರದ ಕಾಂಗ್ರೆಸ್ ರಾಜ್ಯಾಧ್ಯಕ್ಷರ ಬಳಿಯೂ ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆ ಕೇಳಿದೆ