ಕಾಂಗ್ರೆಸ್ ನ ಸರಣಿ ಕೊಲೆಯ ಟ್ರೇಲರ್ ಕಾಂಗ್ರೆಸ್ ಆಡಳಿತದ ಕಾರ್ಯವೈಖರಿಯ ಸೂಚನೆಯೇ: ಶ್ರೀನಿಧಿ ಪ್ರಶ್ನೆ

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆ ದೊರಕುತ್ತಿದಂತೆಯೇ ಮತಾಂಧ ಜಿಹಾದಿಗಳು ಮತ್ತು ಕಾಂಗ್ರೆಸ್ ಕೃಪಾಕಟಾಕ್ಷ ಹೊಂದಿರುವ ಬೆಂಬಲಿಗರು ತಮ್ಮ ರಾಕ್ಷಸೀ ನಡೆ ಆರಂಭಿಸಿದ್ದಾರೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆಯಬಹುದಾದ ದುಷ್ಕೃತ್ಯಗಳ ಸರಮಾಲೆಯ ಟ್ರೇಲರ್ ಇದಾಗಿದ್ದು, ಇನ್ನಷ್ಟು ಸರಣಿ ಕೊಲೆಗಳು ನಡೆಯುವ ಆತಂಕ ಎದುರಾಗಿದೆ ಎಂದು ಬಿಜೆಪಿ ಮಾಧ್ಯಮ ವಿಭಾಗ ಸಂಚಾಲಕ ಶ್ರೀನಿಧಿ ಹೆಗ್ಡೆ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಮತ  ಎಣಿಕೆ ಕಾರ್ಯ ಮುಕ್ತಾಯವಾಗುತ್ತಿದ್ದಂತೆಯೇ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಆಗಿದೆ. ಯಾದಗಿರಿಯಲ್ಲೂ ಕಾಂಗ್ರೆಸ್ ದ್ವೇಷಕ್ಕೆ ಬಿಜೆಪಿ ಕಾರ್ಯಕರ್ತ ಬಲಿಯಾಗಿದ್ದಾನೆ. ಹೊನ್ನಾವರದಲ್ಲಿ ಪ್ರಚಾರಕ್ಕೆ ಬಿಜೆಪಿ ಅಭ್ಯರ್ಥಿಗೆ ವಾಹನ ನೀಡಿದ್ದಕ್ಕೆ ಕಾಂಗ್ರೆಸ್ ಪಕ್ಷದ ವಿಜಯೋತ್ಸವ ಸಂದರ್ಭ ಕಾಂಗ್ರೆಸ್ ಬೆಂಬಲಿಗರು ವಾಹನಕ್ಕೆ ಬೆಂಕಿ ಹಚ್ಚಿ ರಾಕ್ಷಸೀ ಕೃತ್ಯ ಮೆರೆದಿದ್ದಾರೆ.

ಇದೆಲ್ಲ ಕಾಂಗ್ರೆಸ್ಸ್ ಪಕ್ಷದ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿ. ಈವರೆಗೆ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಈ ಹತ್ಯೆಗಳನ್ನು ವಿರೋಧಿಸದೇ ಇರುವುದು ಅವರ ವೋಟ್ ಬ್ಯಾಂಕ್ ರಾಜಕಾರಣ ಕಾರಣಕ್ಕಾಗಿ ಎಂಬುದು ಸ್ಪಷ್ಟವಾಗಿದೆ ಎಂದು ಶ್ರೀನಿಧಿ ಹೆಗ್ಡೆ ವಿಶ್ಲೇಷಿಸಿದ್ದಾರೆ.

ದ್ವೇಷ ಬಿಟ್ಟು ಪ್ರೀತಿಗೆ ಜನ, ಮತ ಹಾಕಿದ್ದಾರೆ ಎಂದು ಹೇಳುವ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಉಂಟಾಗಿರುವ ಹತ್ಯೆಗಳ ಬಗ್ಗೆ ಏಕೆ ಮೌನವಾಗಿದ್ದಾರೆ? ಇಂಥ ದ್ವೇಷ ರಾಜಕಾರಣವನ್ನು ನಿಲ್ಲಿಸಬೇಕು. ಸರಣಿ ಕೃತ್ಯವನ್ನು ಬೆಂಬಲಿಸಿದ್ದೇ ಆದರೆ ಮುಂದೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೆಗ್ಡೆ ಹೇಳಿದ್ದಾರೆ.

 
 
 
 
 
 
 
 
 
 
 

Leave a Reply