ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿಯ ವಿರುದ್ಧ ಫ್ಲೆಕ್ಸ್ ಹಾಗೂ ಸ್ಟಿಕ್ಕರ್ಸ್, ಭಿತ್ತಿ ಪತ್ರಗಳ ಅನಾವರಣ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿಯ ವಿರುದ್ಧ ನಡೆಯಲಿರುವ ರಾಜ್ಯವ್ಯಾಪಿ ಪ್ರತಿಭಟನೆಯ ಪ್ರಯುಕ್ತ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಹೊರತಂದಿರುವ ಫ್ಲೆಕ್ಸ್ ಹಾಗೂ ಸ್ಟಿಕ್ಕರ್ಸ್, ಭಿತ್ತಿ ಪತ್ರಗಳನ್ನು ಇಂದು ಉಡುಪಿ ಯಲ್ಲಿ ಅನಾವರಣ ಮಾಡಲಾಯಿತು.
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಗೀತಾ ವಾಗ್ಳೆ ಅವರು ನೇತೃತ್ವದಲ್ಲಿ ಕಾಂಗ್ರೆಸ್ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ತಮ್ಮದೇ ವಾಹನಕ್ಕೆ ಬೆಲೆ ಏರಿಕೆಯ ಕುರಿತಾದ ಸ್ಟಿಕ್ಕರ್ ಅಂಟಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೇಲಿಯೋ ಅವರು ಫ್ಲೆಕ್ಸ್ ಅನ್ನು ಅನಾವರಣ ಗೊಳಿಸಿದರು. ಕೆಪಿಸಿಸಿ ವೀಕ್ಷಕರಾದ  ಹರೀಶ್ ಕಿಣಿ, ರಾಜ್ಯ ಹಿಂದುಳಿದ ವರ್ಗಗಳ ಘಟಕದ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ, ಜಿತೇಶ್, ಕೀರ್ತಿ ಶೆಟ್ಟಿ, ನಾಗೇಶ್ ಕುಮಾರ್ ಉದ್ಯಾವರ, ಮೀನಾಕ್ಷಿ ಮಾಧವ ಬನ್ನಂಜೆ. 
ಜ್ಯೋತಿ ಹೆಬ್ಬಾರ್, ಕೋಟಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಪ್ರಭಾ ಶೆಟ್ಟಿ, ಕಾರ್ಕಳ ಬ್ಲಾಕ್ ಅಧ್ಯಕ್ಷೆ  ಅನಿತಾ ಡಿ’ಸೋಜ, ಹೆಬ್ರಿ ಬ್ಲಾಕ್ ಅಧ್ಯಕ್ಷೆ ರಂಜನಿ ಹೆಬ್ಬಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯ ಸುಗುಣಾ ಪೂಜಾರ್ತಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಾಮದ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply