ಸುಪ್ರೀಂ ಕೋರ್ಟ್ ತೀರ್ಪು ಲೋಕಸಭಾ ಚುನಾವಣೆಗೆ ಬಲು ದೊಡ್ಡ ಅಸ್ತ್ರ: ಕೆ.ಉದಯ ಕುಮಾರ್ ಶೆಟ್ಟಿ

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ ಆರ್ಟಿಕಲ್ 370 ರದ್ದು ಮಾಡಿದ ಕೇಂದ್ರ ಸರಕಾರದ ನಿರ್ಧಾರ ಸರಿ ಇದೆ ಎಂದು ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠ ಒಮ್ಮತದ ತೀರ್ಪು ನೀಡಿರುವುದು ಸಂತಸ ತಂದಿದೆ. ಆ ಮೂಲಕ ಇಡೀ ದೇಶ ಒಂದು ಎಂಬ ಪ್ರಧಾನಿ ಮೋದಿಯವರ ಪರಿಕಲ್ಪನೆಗೆ ಸುಪ್ರೀಂ ಕೋರ್ಟ್ ಅಧಿಕೃತ ಮುದ್ರೆ ಒತ್ತಿದೆ. ಈ ಐತಿಹಾಸಿಕ ನಿರ್ಣಯ ಬಿಜೆಪಿ ಪಾಲಿಗೆ, ಮುಂದಿನ ಲೋಕಸಭಾ ಚುನಾವಣೆಗೆ ಬಲು ದೊಡ್ಡ ಅಸ್ತ್ರವಾಗಲಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply