ಉಪರಾಷ್ಟ್ರಪತಿ ಚುನಾವಣೆ: ಎನ್​ಡಿಎ ಅಭ್ಯರ್ಥಿ ಘೋಷಣೆ

ನೂತನ ಉಪರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಕೂಟದ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳ ರಾಜ್ಯಪಾಲರಾದ ಜಗದೀಪ್ ಧನ್ಕರ್ ಕಣಕ್ಕಿಳಿಯಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಧಿಕೃತ ಘೋಷಣೆ ಹೊರಹಾಕಿದ್ದಾರೆ.

ದೇಶದ ಮುಂದಿನ ಉಪರಾಷ್ಟ್ರಪತಿ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭವಾಗಿದೆ. ಉಪಾಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನಕ್ಕೆ ಜುಲೈ 19 ಕೊನೆಯ ದಿನಾಂಕವಾಗಿದ್ದು, ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ ಉಳಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಮತ್ತು ಅದೇ ದಿನ ಫಲಿತಾಂಶಗಳನ್ನು ಸಹ ಘೋಷಿಸಲಾಗುವುದು.

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್​​ 10ರಂದು ಅಂತ್ಯಗೊಳ್ಳಲಿದೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್​ 6ರಂದು ಚುನಾವಣೆ ನಡೆಯಲಿದೆ. ರಾಷ್ಟ್ರಪತಿ ಚುನಾವಣೆಗೆ ಜುಲೈ 18ರಂದು ಮತದಾನ ನಡೆಯಲಿದ್ದು, ಜುಲೈ 21ರಂದು ಫಲಿತಾಂಶ ಹೊರಬರಲಿದೆ. ಎನ್​ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಸ್ಪರ್ಧಿಸಿದ್ದರೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಕಣಕ್ಕಿಳಿದಿದ್ದಾರೆ.

 
 
 
 
 
 
 
 
 
 
 

Leave a Reply