ಜನರನ್ನು ಮರಳು ಮಾಡದ ಕಾಂಗ್ರೆಸ್ ಬಿಟ್ಟಿ ಭಾಗ್ಯ~ ವಿಜಯ ಕೊಡವೂರು

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿಗೆ  ವಿಜಯ ಕೊಡವೂರು ಹರ್ಷ
ನಾಲ್ಕು ರಾಜ್ಯಗಳಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿಗೆ ಉಡುಪಿ ನಗರ ಸಭಾ ಸದಸ್ಯ, ಬಿಜೆಪಿ ಮುಖಂಡ ವಿಜಯ ಕೊಡವೂರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಚುನಾವಣಾ ಫಲಿತಾಂಶ ಮುಂಬರಲಿರುವ ಲೋಕಸಭೆಯ ಚುನಾವಣೆಗೆ ನಾಂದಿಯಾಗಲಿದೆ ಎಂದರುನಮ್ಮೆಲ್ಲರ  ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ಬಡವರ ಕಲ್ಯಾಣ ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಗೌರವಯುತವಾಗಿ ಬಾಳುವ ಅವಕಾಶವನ್ನು ಕಲ್ಪಿಸಿರುವ ಜೊತೆಗೆ  ವಿವಿಧ ರಾಜ್ಯಗಳಲ್ಲಿ ಬಿಜೆಪಿ ಕಾರ್ಯಕರ್ತರ ಬಲಿಷ್ಠ ಸಂಘಟನೆ ಈ ಎಲ್ಲ ಗೆಲುವಿಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ತೆಲಂಗಾಣದಲ್ಲೂ ಬಿಜೆಪಿ ಅಧಿಕಾರಕ್ಕೇರುವುದರಲ್ಲಿ ಯಾವುದೇ ಸಂಶಯ ಬೇಡ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರ ಸಮರ್ಥ ನಾಯಕತ್ವದಿಂದ ಗೆಲುವಿನ ಯಾತ್ರೆ ಮುಂದುವರಿಯಲಿದ್ದು ಮಗದೊಮ್ಮೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ  400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಭಾರತಕ್ಕೆ ಸುಭದ್ರ ಆಡಳಿತ ನೀಡಲಿದೆ.

ಕರ್ನಾಟಕದಲ್ಲಿ  28 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಬಿಟ್ಟಿ ಭಾಗ್ಯಗಳಿಗಿಂತ ಅಭಿವೃದ್ಧಿ ಪರ, ಜನ ಪರ ಆಡಳಿತವೇ ಮುಖ್ಯ ಎಂಬುದನ್ನು ಜನತೆ ಈ ಚುನಾವಣೆಯಲ್ಲಿ ಸಾಬೀತುಪಡಿಸಿದ್ದಾರೆ. ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲ ಸ್ಥಾನಗಳನ್ನು ಗೆಲ್ಲುವ ಮೂಲಕ  ಕಾಂಗ್ರೆಸ್ಸಿನ ಜನ ವಿರೋಧಿ ನೀತಿಗೆ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಜಯ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply