ಮೀನುಗಾರರ ಪ್ರಕೋಷ್ಠದ ಸಂಚಾಲಕ ಯಶ್ ಪಾಲ್ ಸುವರ್ಣರವರಿಗೆ ಗೌರವ ಅಭಿನಂದನೆ .

ದಾವಣಗೆರೆಯಲ್ಲಿ ಆಯೋಜಿಸಿದ್ದ ರಾಜ್ಯ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಹಾಗೂ ಸಹ ಸಂಚಾಲಕರ ವಿಶೇಷ ಸಭೆಯಲ್ಲಿ ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠದ ಸಂಚಾಲಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.

ಸಮಾರಂಭವನ್ನು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರವೀಂದ್ರನಾಥ್ ಉದ್ಘಾಟಿಸಿದರು. ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕರಾದ ಶ್ರೀ ಭಾನು ಪ್ರಕಾಶ್, ಸಹ ಸಂಚಾಲಕರಾದ ಡಾ ಎ ಎಚ್ ಶಿವಯೋಗಿ ಸ್ವಾಮಿ, ಹಾಗೂ ಪಕ್ಷದ ವಿವಿಧ ನಾಯಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ನೂತನವಾಗಿ ನಿಯುಕ್ತಿಗೊಂಡ ಮೀನುಗಾರರ ಪ್ರಕೋಷ್ಠದ ಸಂಚಾಲಕರಾದ ಶ್ರೀ ಯಶ್ ಪಾಲ್ ಸುವರ್ಣ ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

 
 
 
 
 
 
 
 
 
 
 

Leave a Reply