ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ “ಸೆಕೆಂಡ್ ಡೋಸ್ ವ್ಯಾಕ್ಸಿನ್ ಶಿಬಿರ”

ಉಡುಪಿ : ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಬನ್ನಂಜೆಯ ಸಹಭಾಗಿತ್ವದಲ್ಲಿ ಅಧ್ಯಾಪಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸೆಕೆಂಡ್ ಡೋಸ್ ವ್ಯಾಕ್ಸಿನ್ ಶಿಬಿರ ನಡೆಯಿತು.

ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಪ್ರದೀಪ್ ಕುಮಾರ್, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹೇಮಂತ್ ಕುಮಾರ್ ಮಾರ್ಗದರ್ಶನ ನೀಡಿದರು.ಕಾಲೇಜಿನ ಪ್ರಾಚಾರ್ಯ ಡಾ. ಸುಕನ್ಯಾ ಮೇರಿ ಜೆ. ನಿರ್ದೇಶಿಸಿದರು. ಪ್ರಾಕ್ತನ ವಿದ್ಯಾರ್ಥಿ ನಬೀಲ್ ಸಹಕರಿಸಿದರು.

ಯೋಜನಾಧಿಕಾರಿ ರಮಾನಂದ ರಾವ್ ಹಾಗೂ ಶ್ರೀಲತಾ ಆಚಾರ್ಯ ಶಿಬಿರವನ್ನು ಆಯೋಜಿಸಿದರು. ಆಶಾ ಕಾರ್ಯಕರ್ತೆ ಹಿಮ, ಆರ್.ಬಿ.ಎಸ್.ಕೆ. ಸ್ಟಾಪ್ ನರ್ಸ್ ದೀಪ, ಶೈಲ, ಮೀನಾಕ್ಷಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

 
 
 
 
 
 
 
 
 
 
 

Leave a Reply