ಕಾರ್ಕಳ ಉತ್ಸವದ​ಲ್ಲಿ ವಿಶೇಷ ಅಂಚೆ ಲಕೋಟೆ ​ಲೋಕಾರ್ಪಣೆ

ಕಾರ್ಕಳ: ಕಾರ್ಕಳ ಉತ್ಸವದ ಪ್ರಯುಕ್ತ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ ಕಾರ್ಕಳದ ಗಾಂಧೀ ಮೈದಾನದಲ್ಲಿ ಬುಧವಾರ ನಡೆಯಿತು. ಲೋಕಸಭಾ ಮಾಜಿ ಸ್ಪೀಕರ್ ಜಸ್ಟಿನ್ ಕೆ ಎಸ್ ಹೆಗ್ಡೆ , ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ಶಿಲ್ಪಿ ರೆಂಜಾಳ ಗೋಪಾಲಕೃಷ್ಣ ಶೆಣೈ, ಕರ್ನಾಟಕ ಶಿಲ್ಪ ಕಲಾ ಅಕಾಡಮಿ ಪ್ರಥಮ ಅಧ್ಯಕ್ಷ ಶಿಲ್ಪಿ ಶ್ಯಾಮರಾಯ ಆಚಾರ್ಯ ರವರ ವಿಶೇಷ ಅಂಚೆ ಲಕೋಟೆಯನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು.

ಈ ಸಂದರ್ಭ ರಾಜ್ಯೋತ್ಸವ ಪ್ರಶಸ್ತಿ ವಿಜೇತ ನ್ಯಾಯವಾದಿ ಎಂ.ಕೆ.ವಿಜಯಕುಮಾರ್, ಹೆಬ್ರಿ ತಹಸೀಲ್ದಾರ್ ಪುರಂದರ.ಕೆ, ಕಾರ್ಕಳ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಕಾರ್ಕಳ ಡಿವೈಎಸ್ಪಿ ವಿಜಯಪ್ರಸಾದ್, ಕಾರ್ಕಳ ಪುರಸಭಾ ಅಧ್ಯಕ್ಷೆ ಸುಮಾ ಕೇಶವ ‌, ಮುಖ್ಯಾಧಿಕಾರಿ ರೂಪಾ ಶೆಟ್ಟಿ, ಅಂಚೆ ಇಲಾಖೆ ಅಧಿಕಾರಿ ವಿ.ಎನ್.ಮಲ್ಲಿಕಾರ್ಜುನ, ಕನ್ನಡ ಸಂಸ್ಕೃತಿ ಇಲಾಖೆಯಾ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ತಾ.ಪಂ. ಕಾರ್ಯ ನಿರ್ವಾಹಣಾಧಿಕಾರಿ ಕೆ.ಎಸ್.ಗುರುಪ್ರಸಾದ್, ಕ್ಯಾಪ್ಟನ್ ಪ್ರಸನ್ನ ಹೆಗ್ಡೆ, ರಾಧಮಾಧವ ಶೆಣೈ, ಸತೀಶ್ ಆಚಾರ್ಯ ಉಪಸ್ಥಿತರಿದ್ದರು
 
 
 
 
 
 
 
 
 
 
 

Leave a Reply