ಪೂರ್ಣಪ್ರಜ್ಞ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

ಪ್ರಜಾಪ್ರಭುತ್ವವನ್ನು ಚೆನ್ನಾಗಿ ಅರ್ಥೈಸಿಕೊಂಡು ಭಾರತೀಯತೆಯ ಸ್ಪಷ್ಟತೆಯನ್ನು ತಿಳಿದು ವಿದ್ಯಾರ್ಥಿಗಳು ಸ್ವಾವಲಂಬಿಯಾಗಿ ಜೀವನವನ್ನು ಸಾರ್ಥಕಗೊಳಿಸಿ ದೇಶವನ್ನು ಕಟ್ಟಬೇಕು ಎಂದು ಅದಮಾರುಮಠ ಶಿಕ್ಷಣಸಂಸ್ಥೆಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀಶ್ರೀ‌ ಈಶಪ್ರಿಯತೀರ್ಥಶ್ರೀಪಾದರು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣ‌ ಮಾಡಿ ಸಂದೇಶವನ್ನು‌ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಘವೇಂದ್ರ ಎ ಉಪಪ್ರಾಂಶುಪಾಲರಾದ ಡಾ. ಪ್ರಕಾಶ ರಾವ್ ಎ ಉಪಸ್ಥಿತರಿದ್ದರು. ಕಾಲೇಜಿನ ಹಾಗೂ ಸಹ ಸಂಸ್ಥೆಗಳ ಸಹೋದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಎನ್ ಸಿ ಸಿ ಕೆಡೆಟ್ ಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply