ಉಡುಪಿ: ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ವತಿಯಿಂದ ನಡೆಯುವ ವಿಶ್ವಾರ್ಪಣಮ್ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ 9ರಂದು ಅಪರಾಹ್ನ 4 ಗಂಟೆಗೆ ಸೃಜನಾತ್ಮಕ ಭಾರತೀಯ ಅಸ್ಮಿತೆ ಮತ್ತು ಮಣಿಪುರದ ವಿದ್ಯಮಾನಗಳುಕುರಿತು ಚಿಂತನ ಮತ್ತು ಸಂವಾದ ನಡೆಯಲಿದೆ.
ನಟ ನಿರ್ದೇಶಕ ಹಾಗೂ ರಂಗಭೂಮಿ ಕಲಾವಿದ ಪ್ರಕಾಶ್ ಬೆಳವಾಡಿ ಮಾತನಾಡಲಿದ್ದು, ಚಿಂತಕ ರೋಹಿತ್ ಚಕ್ರತೀರ್ಥ ಸಂವಾದ ನಡೆಸಿಕೊಡುವರು. ಕಾರ್ಯಕ್ರಮ ಉಡುಪಿಯ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಬಳಗದ ಪ್ರಕಟಣೆ ತಿಳಿಸಿದೆ.