ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಕ್ಯಾತ್ ಕೆ ರಾಜ್ಯಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಹಾಸನ ಜಿಲ್ಲೆಯ ತಾಲೂಕು ಕ್ರೀಡಾಂಗಣ ಚೆನ್ನಾರಾಯಪಟ್ಟಣದಲ್ಲಿ ಜರಗಿದ್ದು ಕಾಪು ದಂಡತೀರ್ಥ ಆಂಗ್ಲ ಮಾಧ್ಯಮ ಪ್ರೌಡಶಾಲಾ ವಿದ್ಯಾರ್ಥಿ ಪ್ರಕ್ಯಾತ್ ಕೆ ಪೂಜಾರಿ ಉಡುಪಿ ಜಿಲ್ಲೆಯ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ ಬೆಳಪು ಕೃಷ್ಣ ಜಯಶ್ರೀ ದಂಪತಿಯ ಪುತ್ರ ಹಾಗೂ ಕಟಪಾಡಿ ಕ್ರಿಕೆಟ್ ಕೋಚ್ ಉದಯ್ ಹಾಗೂ ಪ್ರದೀಪ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾನೆ.

 
 
 
 
 
 
 
 
 
 
 

Leave a Reply