ಮುತಾಲಿಕ್‌ಗೆ ನಿರ್ಬಂಧ :ಕೊರಗಜ್ಜನ ಮೊರೆ ಹೋದ ಹಿಂದೂ ಕಾರ್ಯಕರ್ತರು

ಕುಂದಾಪುರ: ಕಳೆದ ವಾರ ಗಂಗೊಳ್ಳಿಯಲ್ಲಿ ಹಿಂ.ಜಾ.ವೇ ವತಿಯಿಂದ ವೀರೇಶ್ವರ ದೇವಸ್ಥಾನದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಆಗಮಿಸದಂತೆ ಶ್ರೀರಾಮ‌ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ಗೆ ನಿರ್ಬಂಧ ಹೇರಲಾಗಿತ್ತು. ನಿರ್ಬಂಧ ಹೇರಲು ಕಾರಣವಾದ ಕಾಣದ ಕೈಗಳ ವಿರುದ್ಧ ಗಂಗೊಳ್ಳಿಯ ಹಿಂದೂ ಸಂಘಟನೆ ಕಾರ್ಯಕರ್ತರು ಕೊರಗಜ್ಜನ ಮೊರೆಹೋಗಿ ನ್ಯಾಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

ಗಂಗೊಳ್ಳಿ ಜಾಗೃತ ಹಿಂದೂ ಕಾರ್ಯಕರ್ತರು ಬುಧವಾರ ಮುಂಜಾನೆ ಗಂಗೊಳ್ಳಿ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮುಳ್ಳಿಕಟ್ಟೆ ಕೊರಗಜ್ಜನ ಸನ್ನಿಧಿಗೆ 7 ಕಿ.ಮೀ ಪಾದಯಾತ್ರೆ ಮೂಲಕ ಸಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಕಾರ್ಯಕ್ರಮಕ್ಕೆ ಅನುಮತಿ ಸಿಕ್ಕಿದ್ದರು ಕೆಲವು ಕಾಣದ ರಾಜಕೀಯ ವ್ಯವಸ್ಥೆಗಳಿಂದ ಕೊನೆ ಕ್ಷಣದಲ್ಲಿ ಪ್ರಮೋದ್ ಮುತಾಲಿಕ್‌ಗೆ ಉಡುಪಿ ಜಿಲ್ಲೆಗೆ ನಿರ್ಬಂಧ ಹೇರಲಾಗಿತ್ತು. ಇದರಿಂದ ಕಾರ್ಯಕ್ರಮ ಅಸ್ತವ್ಯಸ್ತಗೊಂಡಿದ್ದು, ಹೀಗೆ ಮಾಡಿದ ಕಾಣದ ಕೈಗಳ ವಿರುದ್ಧ ನ್ಯಾಯಕ್ಕಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

 
 
 
 
 
 
 
 
 

Leave a Reply