ಉಡುಪಿ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ 

 ದಿನಾಂಕ 15/04/2022 ರಂದು ಹಿಂದೂ ಜಾಗರಣಾ ವೇದಿಕೆ ಗಂಗೊಳ್ಳಿರವರು ಗಂಗೊಳ್ಳಿ ಗ್ರಾಮದ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಅಂಗವಾಗಿ ಸಂಜೆ 05:00 ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪ್ರಮೋದ ಮುತಾಲಿಕ ಶ್ರೀ.ರಾಮ ಸೇನಾ ಮುಖ್ಯಸ್ಥರು ಕಾರ್ಯಕ್ರಮಲ್ಲಿ ಪಾಲ್ಗೋಂಡು ಪ್ರಚೋಧನಾಕಾರಿ ಭಾಷಣ ಮಾಡಿದ್ದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹರ್ದತೆಗೆ ಧಕ್ಕೆ ಆಗಿ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ಸಾದ್ಯತೆಗಳು ಹೆಚ್ಚಾಗಿರುವುದರಿಂದ, ಹಾಗೂ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮವು ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಈ ಹಿಂದೆ 2014 ರಿಂದ ಕೋಮು ಪ್ರೇರಿತ ಘಟನೆ ನಡೆದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿರುತ್ತವೆ. ಆದ್ದರಿಂದ ದಿನಾಂಕ 15/04/2022 ರಂದು ಶ್ರೀ ಪ್ರಮೋದ ಮುತಾಲಿಕ್, ಶ್ರೀ.ರಾಮ ಸೇನಾ ಮುಖ್ಯಸ್ಥರು ಇವರ ಆಗಮನದ ಪ್ರವೇಶವನ್ನು ಉಡುಪಿ ಜಿಲ್ಲಾದ್ಯಂತ ನಿರ್ಭಂಧಿಸಲು ಆದೇಶಿಸುವಂತೆ ಪೊಲೀಸ್‌ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ಇವರು ಉಲ್ಲೇಖ(2)ರಂತೆ ಮನವಿ ಸಲ್ಲಿಸಿರುತ್ತಾರೆ.

ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿದೆ ಈ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಉಲ್ಲೇಖ(2)ರ ಪತ್ರದಲ್ಲಿನ ಪೊಲೀಸ್‌ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ಇವರ ಮಾಹಿತಿಯನ್ನು ಆಧರಿಸಿ ಮುಂಜಾಗೃತ ಕ್ರಮವಾಗಿ ಕೂರ್ಮಾ ರಾವ್‌ ಎಂ ,ಭಾ.ಆ.ಸೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಉಡುಪಿ ಜಿಲ್ಲೆ, ಉಡುಪಿ ಆದ ನಾನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 133, 143 ಮತ್ತು 144 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡಂತೆ ಆದೇಶವನ್ನು ಹೊರಡಿಸಿರುತ್ತೇನೆ.

ಆದೇಶ

   ಮೇಲೆ ವಿವರಿಸಿದ ಅಂಶಗಳನ್ನು ಆಧರಿಸಿ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 133, 143 ಮತ್ತು 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಿನಾಂಕ 15/04/2022 ರಂದು ಶ್ರೀ ಪ್ರಮೋದ ಮುತಾಲಿಕ್, ಶ್ರೀ.ರಾಮ ಸೇನಾ ಮುಖ್ಯಸ್ಥರು ಇವರ ಆಗಮನದ ಪ್ರವೇಶವನ್ನು ಉಡುಪಿ ಜಿಲ್ಲಾದ್ಯಂತ ನಿರ್ಭಂಧಿಸಿ ಸಿ.ಆರ್.ಪಿ.ಸಿ ಸೆಕ್ಷನ್‌ 133, 143 ಮತ್ತು 144 ರನ್ವಯ ನಿಷೇದಾಜ್ಞೆಯನ್ನು ವಿಧಿಸಿ ಆದೇಶಿಸಿರುತ್ತೇನೆ.               

  •             ~ ಜಿಲ್ಲಾಧಿಕಾರಿ, ಉಡುಪಿ
 
 
 
 
 
 
 
 
 

Leave a Reply