ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲೂ ಮುಸ್ಲಿಮರ ವ್ಯಾಪಾರ ಬಹಿಷ್ಕಾರ ಮಾಡಬೇಕು ~ಪ್ರಮೋದ್ ಮುತಾಲಿಕ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವ್ಯಾಪಾರಕ್ಕೆ ಬೇರೆ ಧರ್ಮದವರಿಗೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆಗಳು ಮನವಿ ಮಾಡಿದ್ದು, ಈ ಹಿನ್ನೆಲೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸುಬ್ರಹ್ಮಣ್ಯದಲ್ಲಿ ಬ್ಯಾನರ್ ಅಳವಡಿಸಿರುವುದು ಸ್ವಾಗತಾರ್ಹ ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ.

ದೇಶದಲ್ಲಿ ಹುಟ್ಟಿ, ಅದೇ ದೇಶದ ದೇವಸ್ಥಾನದಲ್ಲಿ ಬಾಂಬ್ ಇಟ್ಟು ಉಡಾಯಿಸುವ ದುಷ್ಟರ ವಿರುದ್ಧ ನಮ್ಮ ಹೋರಾಟ ನಡೆಯುತ್ತದೆ. ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲೂ ಮುಸ್ಲಿಮರ ವ್ಯಾಪಾರ ಬಹಿಷ್ಕಾರ ಮಾಡಬೇಕು ಎಂದು ತಿಳಿಸಿದರು.

ಅವರು ಇಂದು ಚಾಮರಾಜನಗರದಲ್ಲಿ ಆಜಾದ್ ಹಿಂದೂ ಸೇನೆ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು. ಇಲ್ಲಿಯವರೆಗೆ ಹಿಂದುಗಳು ಶಾಂತಿಯಿಂದ ವರ್ತಿಸಿದ್ದಾರೆ. ಅವರ ಒಳ್ಳೆತನವನ್ನು ದುರುಪಯೋಗ ಮಾಡಿಕೊಳ್ಳುವ ಕೆಲಸ ನಡೆಯುತ್ತಿದೆ, ಇಂತಹ ಮಾನಸಿಕತೆಯ ವಿರುದ್ಧವೇ ವ್ಯಾಪಾರ ಬಹಿಷ್ಕರಿಸಲಾಗಿದೆ ಎಂದು ಹೇಳಿದರು.

 
 
 
 
 
 
 
 
 
 
 

Leave a Reply