ಮಂಗಳೂರಿನ ಗೋಡೆ ಬರಹಕ್ಕೆ ಕೇರಳದ ಕುಮ್ಮಕ್ಕಿದೆ ಎಂದ ಸಂಸದ ಪ್ರತಾಪ ಸಿಂಹ

ಚಿತ್ರದುರ್ಗ: ಮಂಗಳೂರು ನಗರದ ಬರಹ ಸೇರಿದಂತೆ ಕರಾವಳಿ ಭಾಗದ ಭಯೋತ್ಪಾದಕ ಚಟುವಟಿಕೆಗಳಿಗೆ ಕೇರಳದ ಕುಮ್ಮಕ್ಕು ಇರುವ ಸಾಧ್ಯತೆ ಇದೆ. ಆದ್ದರಿಂದ ಇಂತಹ ಕೃತ್ಯಗಳನ್ನು ತಡೆಯಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಂಸದ ಪ್ರತಾಪ ಸಿಂಹ ಆಗ್ರಹಿಸಿದರು.

ಶನಿವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ, ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿರುವುದು ಯಾಸಿನ್ ಭಟ್ಕಳ್ ಹಾಗೂ ರಿಯಾಜ್ ಭಟ್ಕಳ್ ಅವರ ಕೃತ್ಯಗಳಿಂದ ಈಗಾಗಲೇ ತಿಳಿದುಬಂದಿದೆ.

ಇದೀಗ‌ ಮಂಗಳೂರಿನಲ್ಲಿ ಈ ಘಟನೆ ನಡೆದಿದೆ,ಇಂತಹ ಘಟನೆಗಳು ಮತ್ತೆ ರಾಜ್ಯದಲ್ಲಿ ನಡೆಯದಂತೆ ಎಚ್ಚರ ವಹಿಸಬೇಕು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹಸಚಿವ ಬಸವರಾಜ ಬೊಮ್ಮಯಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.

 
 
 
 
 
 
 
 
 
 
 

Leave a Reply