ಸ.ಪ.ಪೂ.ಕಾಲೇಜು,ಕುಕ್ಕುಜೆ: ಮುನಿಯಾಲು ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’

ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕಾರ್ಕಳ ಇವರ ಸಹಯೋಗದಲ್ಲಿ ಮುನಿಯಾಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ.ಪ.ಪೂ.ಕಾಲೇಜು,ಕುಕ್ಕುಜೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಡ್ತಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲತಿ ದಿನೇಶ್ ಕುಲಾಲ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಯಮುನಾ ಬೆಳಿರಾಯ, ಎಸ್ ಬಿ ಸಿ ಕಾರ್ಯಧ್ಯಕ್ಷರಾದ ದಯಾನಂದ ಹೆಗ್ಡೆ, ಹೆಬ್ರಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ, ಕುಕ್ಕುಜೆ ಕಾಲೇಜಿನ ಪ್ರಾಂಶುಪಾಲರಾದ ರಮೇಶ್ ನಾಯ್ಕ್,
ಹೆಬ್ರಿ ವೃತ್ತ ಶಿಕ್ಷಣ ಸಂಯೋಜಕ ವೆಂಕಟರಮಣ ಕಲ್ಕೂರ್, ಸಿಆರ್ ಪಿ ಗಳಾದ ಪ್ರತಿಮಾ,ಸುಮಶ್ರೀ, ಪ್ರೀತೇಶ್ ಶೆಟ್ಟಿ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸಂಜೀವ ಪೂಜಾರಿ,ಸಿ ಎ ಬ್ಯಾಂಕ್ ಉಪಾಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಕಡ್ತಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಪೂಜಾರಿ ಉಪಸ್ಥಿತರಿದ್ದರು.
ಪ್ರತಿಮಾ ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ವಂದಿಸಿದರು.
ಸುರೇಶ್ ಮರಕಾಲ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply