ಉಡುಪಿ : ಉಡುಪಿ ಜಿಲ್ಲೆ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿದಂತಹ ಜಿಲ್ಲೆ. ಮೊದಲಿನಿಂದಲೂ ಸಹ ಎಲ್ಲಾ ಧಾರ್ಮಿಕ- ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಅತ್ಯುತ್ತಮ ವಾತಾವರಣ ಹೊಂದಿ, ಪ್ರವಾಸಿಗರನ್ನು ಹೆಚ್ಚು ಮನಸೆಳೆಯುವ ಜಿಲ್ಲೆಯಾಗಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು. ಅವರು ಇಂದು ಜಿಲ್ಲಾಡಳಿತ , ಪ್ರವಾಸೋದ್ಯಮ ಇಲಾಖೆ ಉಡುಪಿ, ಮಲ್ಪೆ ಅಭಿವೃದ್ಧಿ ಸಮಿತಿ, ನೆಹರು ಯುವ ಕೇಂದ್ರ , ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ, ಜಿಲ್ಲೆ ಹಾಗೂ ಸೌಟ್ಕ್ & ಗೈಡ್ಸ್ ಇವರ ಸಹಯೋಗದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಹಾಗೂ ಗ್ರಾಮೀಣಾಭಿವೃದ್ಧಿ ಘೋಷಣೆಯೊಂದಿಗೆ ಆಯೋಜಿಸಿದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ಬರುವವರು ಬೇರೆಯವರಿಗೆ ತೊಂದರೆಯಗದ ರೀತಿಯಲ್ಲಿ ಪ್ರವಾಸವನ್ನು ಮಾಡಿ ಹೋಗಬೇಕೆಂದು ಮನವಿ ಮಾಡಿಕೊಂಡರು. ಬ್ಲೂ ಪ್ಲಾಗ್ ಬೀಚ್ ಇನ್ನೆನ್ನೂ ಅಂತ ರಾಷ್ಟ್ರೀಯ ಮನ್ನಣೆಯನ್ನು ಪಡೆಯುದಷ್ಟೇ ಬಾಕಿ, ರಾಷ್ಟ್ರೀಯ ಎಲ್ಲಾ ಜ್ಯೂರಿಗಳು ಅತ್ಯುತ್ತಮವಾಗಿ ಬೆಳವಣಿಗೆಯಾಗಿರುವ ಬೀಚ್ ಎಂದರೆ ಪಡುಬಿದ್ರಿಯ ಎಂಡ್ ಪಾಯಿಂಟ್ ಬೀಚ್ ಬ್ಲೂ ಪ್ಲಾಗ್ ಬೀಚ್ ಎಂದು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದರು. ಪ್ರವಾಸೋದ್ಯಮಕ್ಕೆ ಉಡುಪಿ ಜಿಲ್ಲೆಯಲ್ಲಿ ಹೊಸ ಆಯಾಮವನ್ನು ಕೊಡಬೇಕು , ಹೊಸತನವನ್ನು ನೀಡಬೇಕು, ಎಲ್ಲಾ ರಾಜ್ಯದ-ರಾಷ್ಟ್ರದ ಜನರು ಉಡುಪಿಯತ್ತ ಪ್ರವಾಸೋದ್ಯಮಕ್ಕೆ ಬರುವಂತಾಗಬೇಕೆಂದು ತಿಳಿಸಿದರು. 






ಗಣ್ಯರು ಬೀಚ್ನ ಸುತ್ತ-ಮುತ್ತ ಎಲ್ಲಾ ಸ್ವಚ್ಛತಾ ಕಾ ರ್ಯದಲ್ಲಿ ಭಾಗಿಯಾದರು. ಕಾ ರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್, ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ, ಜಿಲ್ಲಾ ಸೌಟ್ಕ್ ಆಯುಕ್ತ ಡಾ. ವಿಜಯೇಂದ್ರ, ಕೌನ್ಸಿಲರ್ ಶ್ರೀಶ ಕೊಡವೂರು, ಸುಂದರ್ ಕಲ್ಮಾಡಿ, ಆ್ಯಡ್ಲಿನ್ ಉಪಸ್ಥಿತರಿದ್ದರು. ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ನಾಯ್ಕ್, ಸ್ವಾಗತಿಸಿ ಮಲ್ಪೆ ಅಭಿವೃದ್ಧಿ ಸಮಿತಿ ಹಾಗೂ ಪೌರಾಯುಕ್ತ ಆನಂದ್.ಚಿ ಕಲ್ಲೋಳಿಕರ್ ನಿರೂಪಿಸಿದರು