ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರೆಸ್ಕ್ಲಬ್ ಸಹಯೋಗದಲ್ಲಿ ಪ್ರತಿ ತಿಂಗಳು ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯ ವ್ಯಕ್ತಿಗಳ ಜೊತೆ ಸಂವಾದ ನಡೆಸುವ ‘ತಿಂಗಳ ಮಾಧ್ಯಮ ಸಂವಾದ’ ಕಾರ್ಯಕ್ರಮವನ್ನು ಉಡುಪಿ ಪತ್ರಿಕಾ ಭವನದಲ್ಲಿ ಏರ್ಪಡಿಸಲು ಈಗಾಗಲೇ ತೀರ್ಮಾನಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಎ.15ರಂದು ಬೆಳಗ್ಗೆ 9.30ಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಚಾಲನೆ ನೀಡಲಿದ್ದು, ಬಳಿಕ ಅವರೊಂದಿಗೆ ಸಂವಾದ ನಡೆಯಲಿದೆ. ಈ ಸಂವಾದದಲ್ಲಿ ಸುದ್ದಿಗಾಗಿ ಪ್ರಶ್ನೆ ಮಾತ್ರವಲ್ಲದೆ ನಮ್ಮ ಸಾಮಾನ್ಯ ಜ್ಞಾನಕ್ಕಾಗಿ ಜಿಲ್ಲಾಧಿಕಾರಿ ವ್ಯಾಪ್ತಿಯಲ್ಲಿ ಬರುವ ಮಾಹಿತಿಗಳನ್ನು ಪಡೆಯ ಬಹುದಾಗಿದೆ.
ಇದರಲ್ಲಿ ಜಿಲ್ಲೆಯ ಪತ್ರಕರ್ತರು ಭಾಗವಹಿಸಲು ಅವಕಾಶ ಇರುತ್ತದೆ. ಅಲ್ಲದೆ ಈ ಕಾರ್ಯಕ್ರಮವನ್ನು ಉಡುಪಿ ಪ್ರೆಸ್ಕ್ಲಬ್ನ ಯೂಟ್ಯೂಬ್ ಚಾನೆಲ್ನಲ್ಲಿ ನೇರ ಪ್ರಸಾರ ಮಾಡಲಾಗುವುದು.