ಪುನರೂರು ಪ್ರತಿಷ್ಠಾನ (ರಿ.) ಇದರ ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮುಲ್ಕಿ ಇದರ ಸಹಕಾರದಲ್ಲಿ ಪ್ರತಿಭಾ ಸೌರಭ-2020-21 ರ ಉದ್ಘಾಟನಾ ಸಮಾರಂಭ ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸಭಾ ಭವನ ಕಟೀಲಿನಲ್ಲಿ ಶನಿವಾರ ನಡೆಯಿತು. ಈ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ವೇದಮೂರ್ತಿ ಶ್ರೀ ಲಕ್ಷ್ಮಿನಾರಾಯಣ ಅಸ್ರಣ್ಣರು ಉದ್ಘಾಟಿಸಿದರು.