ಅಂಬಲಪಾಡಿಯಲ್ಲಿ ಪುನೀತ್ ರಾಜ್ ಕುಮಾರ್ ರವರಿಗೆ ಶ್ರದ್ಧಾಂಜಲಿ

ಸ್ವಸ್ತಿಕ್ XI ಕ್ರಿಕೆಟರ್ಸ್ ಅಂಬಲಪಾಡಿ ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ಆಶ್ರಯದಲ್ಲಿ ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು.


ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ವಿಜಯ ಬಲ್ಲಾಳ, ಉಡುಪಿ ಜಿ.ಪಂ.ನಿಕಟಪೂರ್ವ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮತ್ತು ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಪಾಧ್ಯಕ್ಷೆ ವಿಜಯಾ ಜಿ. ಬಂಗೇರ ಇವರು ಮೇರು ನಟ, ಮಾನವತಾವಾದಿ, ಕನ್ನಡ ನಾಡಿನ ಅನರ್ಘ್ಯ ರತ್ನ ಎನಿಸಿರುವ ಪುನೀತ್ ರಾಜ್ ಕುಮಾರ್ ರವರ ಸಾಧನೆ, ಉದಾತ್ತ ಚಿಂತನೆಗಳು ಮತ್ತು ಜೀವನಾದರ್ಶಗಳ ಗುಣಗಾನಗೈದು ನುಡಿ ನಮನ ಸಲ್ಲಿಸಿದರು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಮೊಂಬತ್ತಿ ಬೆಳಗಿಸಿ, ಮೌನ ಪ್ರಾರ್ಥನೆಯೊಂದಿಗೆ ಅಗಲಿದ ಅವರ ದಿವ್ಯಾತ್ಮಕ್ಕೆ ಚಿರ ಶಾಂತಿ ಕೋರುವ ಮೂಲಕ ಅಂತಿಮ ನಮನ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಸಮಾಜ ಸೇವಕಿ ವಿದ್ಯಾ ಶೆಟ್ಟಿ, ಯುವಕ ಮಂಡಲ(ರಿ.) ಅಂಬಲಪಾಡಿ ಅಧ್ಯಕ್ಷ ಹರೀಶ್ ಪಾಲನ್, ಬಿಜೆಪಿ ಜಿಲ್ಲಾ ಸಹವಕ್ತಾರ ಶಿವಕುಮಾರ್ ಅಂಬಲಪಾಡಿ, ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಸುವರ್ಣ, ಅಂಬೇಡ್ಕರ್ ಯುವ ಸೇನೆ ಉಡುಪಿ ತಾಲೂಕು ಅಧ್ಯಕ್ಷ ದಯಾನಂದ್ ಕಪ್ಪೆಟ್ಟು, ಸಾಮಾಜಿಕ ಕಾರ್ಯಕರ್ತ ಸತೀಶ್ ಭಂಡಾರಿ.  

ಸ್ವಸ್ತಿಕ್ XI ಕ್ರಿಕೆಟರ್ಸ್ ಅಧ್ಯಕ್ಷ ಪ್ರಶಾಂತ್ ಕೆ.ಎಸ್. ಅಂಬಲಪಾಡಿ, ಪದಾಧಿಕಾರಿಗಳಾದ ಅಜಿತ್ ಕಪ್ಪೆಟ್ಟು, ಸುಜಿತ್ ಕಪ್ಪೆಟ್ಟು, ಕಾರ್ತಿಕ್ ಆಚಾರ್ಯ, ಕೀರ್ತಿ ಕಪ್ಪೆಟ್ಟು, ಸುನಿಲ್ ಕುಮಾರ್ ಅಂಬಲಪಾಡಿ, ಕಾರ್ತಿಕ್ ಅಂಬಲಪಾಡಿ, ನಿಶಾಂತ್ ಕಪ್ಪೆಟ್ಟು, ಗಣಪತಿ ಶೆಣೈ ಹಾಗೂ ಸ್ವಸ್ತಿಕ್ XI ಕ್ರಿಕೆಟರ್ಸ್ ಸದಸ್ಯರು ಮತ್ತು ಪುನೀತ್ ರಾಜ್ ಕುಮಾರ್ ರವರ ಅಭಿಮಾನಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply