ರಾಗ ಧನ ಸಂಸ್ಥೆ (ರಿ) ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರಾಗರತ್ನಮಾಲಿಕೆ 25

ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ, ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಹಾಗೂ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದಗಳೊಂದಿಗೆ ರಾಗ ಧನ ಸಂಸ್ಥೆ (ರಿ) ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ರಾಗರತ್ನಮಾಲಿಕೆ _25 ದಿನಾಂಕ 02.06. 2024, ಆದಿತ್ಯವಾರದಂದು ಉಡುಪಿಯ ರಾಜಾಂಗಣದಲ್ಲಿ ಸಂಜೆ 7 ಗಂಟೆಗೆ ಪ್ರಣವಶ್ರೀ ಯಶಸ್ವಿ ಸುಬ್ಬರಾವ್ ಮತ್ತು ಇವರ ಶಿಷ್ಯ ಚಿರಂಜೀವಿ ಮೋಕ್ಷಿತ್ ಯಸ್ ಬೆಂಗಳೂರು ಇವರ ದ್ವಂದ್ವ ವಯೊಲಿನ್ ವಾದನ ಕಚೇರಿ ನಡೆಯಲಿದೆ. ಮೃದಂಗದಲ್ಲಿ ಡಾ.ಅಕ್ಷಯ ನಾರಾಯಣ ಕಾಂಚನ, ಘಟಂನಲ್ಲಿ ಯಸ್. ಮಂಜುನಾಥ್ ಮೈಸೂರು ಸಹಕರಿಸಲಿದ್ದಾರೆ ಎಂದು ರಾಗ ಧನ ಸಂಸ್ಥೆಯ ಕಾರ್ಯದರ್ಶಿ ವಿದುಷಿ ಉಮಾಶಂಕರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 
 
 
 
 
 
 
 
 
 
 

Leave a Reply