ಪರ್ಕಳ ವಾರ್ಡ್ ಹಡಿಲು ಭೂಮಿ ಕೃಷಿ ಮಾಡಲಾದ ಗದ್ದೆಗಳ ಭೂ ಮಾಲಕರಿಗೆ ಉಡುಪಿ ಕೇದಾರ ಕಜೆ

ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಹಡಿಲು ಬಿದ್ದ ಗದ್ದೆಗಳಲ್ಲಿ ಸಾವಯವ ಕೃಷಿ ಮಾಡಲಾಗಿದ್ದು, ಈ ಆಂದೋಲನಕ್ಕೆ ಅನೇಕ ಗದ್ದೆಯ ಭೂಮಾಲಕರು ಸಹಕರಿಸಿದ್ದು ಇಂದು ದಿನಾಂಕ 03-03-2022 ರಂದು ಪರ್ಕಳ ವಾರ್ಡಿನ ಸುಮಾರು 49 ಭೂ ಮಾಲಕರಿಗೆ “ಉಡುಪಿ ಕೇದಾರ ಕಜೆ”ಯನ್ನು ಕೇದಾರೋತ್ಥಾನ ಟ್ರಸ್ಟ್ ನ ಅಧ್ಯಕ್ಷರು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ವಿತರಿಸಿ ಭೂ ಮಾಲಕರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಹಾಗೂ ಸ್ಥಳೀಯ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply