ಪಶ್ಚಿಮ ವಾಹಿನಿ ಯೋಜನೆಯಡಿ ರೂ. 2.42 ಕೋಟಿ ಮೊತ್ತದ ಕಿಂಡಿ ಅಣೆಕಟ್ಟು ನಿರ್ಮಾಣ – ಶಾಸಕ ರಘುಪತಿ ಭಟ್ ಗುದ್ದಲಿ ಪೂಜೆ

ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬೇಡಿಕೆಯಂತೆ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಶಾಸಕ ಶ್ರೀ ಕೆ. ರಘುಪತಿ ಭಟ್ ರವರ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯ ಪಶ್ಚಿಮ ವಾಹಿನಿ ಯೋಜನೆಯಡಿ ರೂ. 2.42 ಕೋಟಿ ಅನುದಾನ ಮಂಜೂರಾಗಿರುತ್ತದೆ. ಈ ಕಾಮಗಾರಿಗಳಿಗೆ ಇಂದು ದಿನಾಂಕ 04-03-2022 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಗುದ್ದಲಿ ಪೂಜೆ ನೆರವೇರಿಸಿದರು.

ಕೆಮ್ಮಣ್ಣು ಗ್ರಾಮ ಪಂಚಾಯತ್ ಕಂಬಳ ತೋಟ ದ (ಕೆಪ್ಪ ತೋಡು) ಬಳಿ ಕಿಂಡಿ ಅಣೆಕಟ್ಟು ನಿರ್ಮಾಣ ರೂ. 86.00ಲಕ್ಷ

ತೆಂಕನಿಡಿಯೂರು ಗ್ರಾಮ ಗೋಪಾಲ ಬೆಳ್ಚಡ ರವರ ಮನೆ ಬಳಿ ಕಿಂಡಿ ಅಣೆಕಟ್ಟು ನಿರ್ಮಾಣ ರೂ. 78.00 ಲಕ್ಷ

ಬಡಾನಿಡಿಯೂರು ಗ್ರಾಮದ ಮಾರಿ ಗುಡ್ಡೆ ಮಾಧವ ಭಟ್ ಮನೆ ಬಳಿ ಕಿಂಡಿ ಅಣೆಕಟ್ಟು ನಿರ್ಮಾಣ ರೂ. 78.00 ಲಕ್ಷ ಸೇರಿದಂತೆ ಒಟ್ಟು 2 ಕೋಟಿ 42 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೆಮ್ಮಣ್ಣು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ, ಬಡಾನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ್ ತಿಂಗಳಾಯ, ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶೇಷಕೃಷ್ಣ, ಸಹಾಯಕ ಅಭಿಯಂತರರಾದ ಹರೀಶ್, ಕೆಮ್ಮಣ್ಣು ಗ್ರಾಮ ಪಂಚಾಯತ್ ಸದಸ್ಯರು, ಬಡಾನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು, ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply