ಸಮನ್ವಯ ಶಿಕ್ಷಣ ಕೇಂದ್ರ ಉದ್ಘಾಟನೆ ಹಾಗೂ ಇಲಾಖೆಗಳ ಕಟ್ಟಡ ಹಸ್ತಾಂತರ ಕಾರ್ಯಕ್ರಮ – ಶಾಸಕ ರಘುಪತಿ ಭಟ್ ಭಾಗಿ

ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಉಡುಪಿ, ಕ್ಷೇತ್ರ ಸಮನ್ವಯಾಧಿಕಾರಿಯವರ ಕಚೇರಿ ಉಡುಪಿ, ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರ ಉಡುಪಿ ವಲಯ ಉಡುಪಿ ಜಿಲ್ಲೆ ಇದರ “ಸಮನ್ವಯ ಶಿಕ್ಷಣ ಕೇಂದ್ರದ ಉದ್ಘಾಟನೆ ಹಾಗೂ ಇಲಾಖೆಗಳ ಕಟ್ಟಡ ಹಸ್ತಾಂತರ” ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಇಂದು ದಿನಾಂಕ 19-03-2022 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.

ಸಭೆಯಲ್ಲಿ ಶಾಸಕರು ದಾನಿಗಳನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್, ದಾನಿಗಳಾದ ಮೊಹಮ್ಮದ್ ಫಯಾಜ್, ನಾಗರಾಜ್, ಡಯಟ್ ಹಿರಿಯ ಉಪನ್ಯಾಸಕರಾದ ಪ್ರಭಾಕರ್ ಮಿತ್ಯಂತಾಯ, ನಿವೃತ್ತ ಶಿಕ್ಷಕರಾದ ಗಂಗೆ ಶಾನಬಾಗ್, ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ್ ಕಾಮತ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಉಮಾ ಪಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply