ಶಾಸಕ ರಘುಪತಿ ಭಟ್ ಅವರ ಜನ್ಮದಿನದ ಪ್ರಯುಕ್ತ ಕಣ್ಣಿನ ಉಚಿತ ತಪಾಸಣೆ, ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆ, ನೇತ್ರದಾನ ನೋಂದಣಿ ಶಿಬಿರ

ನಮೋ ಅಭಿಮಾನಿಗಳ ಬಳಗ ಭದ್ರಗಿರಿ ಬೈಕಾಡಿ ಇವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ ಇವರ ಸಹಯೋಗದೊಂದಿಗೆ ಇಂದು ದಿನಾಂಕ 24-02-2022 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರ ಜನ್ಮದಿನದ ಪ್ರಯುಕ್ತ ಕಣ್ಣಿನ ಉಚಿತ ತಪಾಸಣೆ, ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆ, ನೇತ್ರದಾನ ನೋಂದಣಿ ಶಿಬಿರವನ್ನು ಬೈಕಾಡಿ ಬಸ್ಸು ನಿಲ್ದಾಣದ ಬಳಿ ಆಯೋಜಿಸಲಾಗಿದ್ದು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು.

ಈ ಕಾರ್ಯಕ್ರಮವನ್ನು ಆಯೋಜಿಸಿದ ನಮೋ ಅಭಿಮಾನಿಗಳ ಬಳಗ ಭದ್ರಗಿರಿ ಬೈಕಾಡಿ ಮತ್ತು ಗ್ರಾಮಾಂತರ ಬಿಜೆಪಿ ಅವರಿಗೆ ಶಾಸಕರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ನಮೋ ಅಭಿಮಾನಿಗಳ ಬಳಗದ ಅಧ್ಯಕ್ಷರಾದ ಚಂದ್ರಶೇಖರ್, ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾದ ಬಿರ್ತಿ ರಾಜೇಶ್ ಶೆಟ್ಟಿ, ಇಂಡಿಯನ್ ರೆಡ್ ಕ್ರಾಸ್ ಸೋಸೈಟಿ ಕುಂದಾಪುರ ಸಭಾಪತಿ ಜಯಕರ್ ಶೆಟ್ಟಿ, ಶ್ರೀ ಬ್ರಹ್ಮ ಬೈದರ್ಕಳ ಹಾಗೂ ಚಿಕ್ಕಮ್ಮ ದೇವಿ ಗರೋಡಿ ಪಿಳ್ಕಳ, ಉಪ್ಪೂರು ಅಧ್ಯಕ್ಷರಾದ ರಾಜು ಪೂಜಾರಿ, ಶ್ರೀ ಗುರುರಾಮ ಭಜನಾ ಮಂದಿರ ಬೈಕಾಡಿಯ ಬಿ.ಬಿ ರಾವ್, ಬ್ರಹ್ಮಾವರ ರೋಟರಿ ಕ್ಲಬ್ ಅಧ್ಯಕ್ಷರಾದ ಹರೀಶ್ ಕುಂದರ್ ಬೈಕಾಡಿ, ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್. ನಾರಾಯಣ್, ಉದ್ಯಮಿಗಳಾದ ಗಂಗಾಧರ್ ಶೆಟ್ಟಿ ಆರೂರು, ಪ್ರಸಾದ್ ನೇತ್ರಾಲಯದ ಡಾll. ಸಚಿನ್, ಡಾll. ನವಮಿ ಮತ್ತು ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಹಾಗೂ ನಮೋ ಅಭಿಮಾನಿಗಳ ಬಳಗ ಭದ್ರಗಿರಿ ಬೈಕಾಡಿಯ ಸರ್ವ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply