ಗ್ಲೆನ್ವಿಲ್ ಫರ್ನಾಂಡಿಸ್ ರವರ ಮನೆಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಭೇಟಿ

ಉಡುಪಿ ವಿಧಾನಸಭಾ ಕ್ಷೇತ್ರದ ಕಲ್ಯಾಣಪುರ ನಿವಾಸಿ ವಿಲಿಯಂ ಡಿಸೋಜಾ ರವರ ಮಗಳಾದ ಅನಿಫ್ರೆಂಡ್ ರಿಡ್ಲಿ ಡಿಸೋಜಾ ಅವರು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ದೇಶಕ್ಕೆ ತೆರಳಿದ್ದರು. ಪ್ರಸ್ತುತ ಉಕ್ರೇನ್ ನಲ್ಲಿ ಯುದ್ಧದ ಭೀತಿ ಇರುವುದರಿಂದ ಗ್ಲೆನ್ವಿಲ್ ಫರ್ನಾಂಡಿಸ್ ರವರ ಮನೆಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಇಂದು ದಿನಾಂಕ 28-02-2022 ರಂದು ಭೇಟಿ ನೀಡಿ ಕುಟುಂಬದವರಿಗೆ ಧೈರ್ಯ ತುಂಬಿದರು.

ಉಕ್ರೇನ್ ನಲ್ಲಿ ಇರುವ ಭಾರತದ ಎಲ್ಲರನ್ನೂ ಸುರಕ್ಷಿತವಾಗಿ ಕರೆಸಿಕೊಳ್ಳು ಕಾರ್ಯಗಳು ನಡೆಯುತ್ತಿದೆ. ಗ್ಲೆನ್ವಿಲ್ ಫರ್ನಾಂಡಿಸ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆಸಿಕೊಳ್ಳಬೇಕಾದ ಎಲ್ಲಾ ಸಿದ್ಧತೆ ನಡೆಯುತ್ತಿದೆ ಎಂದು ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಉಪಾಧ್ಯಕ್ಷರಾದ ಉದಯ್ ಪೂಜಾರಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರುಗಳಾದ ಸತೀಶ್ ನಾಯ್ಕ್, ನವೀನ್ ಕಾಂಚನ್, ಪಕ್ಷದ ಹಿರಿಯರಾದ ಅಪ್ಪು ಜತ್ತನ್, ಸ್ಥಳೀಯರಾದ ಸ್ಟೀವನ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply