ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುವ ರೈಲು ಮತ್ತೆ ಆರಂಭವಾಗಿದೆ. ಈ ರೈಲು ವಾರದಲ್ಲಿ ನಾಲ್ಕು ದಿನ ಸಂಚರಿಸಲಿದ್ದು, ನಾಗರಿಕರು ಇದರ ಸದುಪಯೋಗ ಪಡೆಯಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ‌.

ಕೊರೋನಾ ಹಿನ್ನೆಲೆ ರದ್ದಾಗಿದ್ದ ರೈಲು ಮತ್ತೆ ಆರಂಭವಾಗಿದೆ. ಆದರೆ ಕರಾವಳಿಯ ಪ್ರಯಾಣಿಕರು ಈ ರೈಲಿನ ಮೂಲಕ ಬೆಂಗಳೂರನ್ನು ಸಂಪರ್ಕಿಸುವುದು ಸುಲಭವಾಗಿರುವುದರಿಂದ ಎರಡು ಜಿಲ್ಲೆಗಳಲ್ಲಿ ವಾಸಿಸುವ ಕರಾವಳಿಗರಿಗೆ ಈ ರೈಲಿನ ಅವಶ್ಯಕತೆಯನ್ನು ಗಮನಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರೈಲ್ವೆ ಸಚಿವರೊಂದಿಗೆ ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ರೈಲು ಮತ್ತೆ ಸಂಚರಿಸುವಂತೆ ಮಾಡಿದ್ದಾರೆ.

 
 
 
 
 
 
 
 
 
 
 

Leave a Reply