ಕಲಾವಿದ ರಾಜೇಂದ್ರ ಗಾಣಿಗ ನಿಧನ

ಎರಡೂವರೆ ದಶಕಗಳ ಕಾಲ ವಿವಿಧ ಮೇಳಗಳಲ್ಲಿ ವೇಷಧಾರಿಯಾಗಿ ಕಲಾಸೇವೆ ಮಾಡಿದ ಯುವ ಕಲಾವಿದ ಹೆರಂಜಾಲು ರಾಜೇಂದ್ರ ಗಾಣಿಗ (೪೧ವರ್ಷ) ಅಲ್ಪಕಾಲದ ಅಸೌಖ್ಯದಿಂದ ಇಂದು (೨೧.೦೯.೨೦೨೩) ಮಣಿಪಾಲದ ಕೆ. ಎಂ. ಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮಾರಣಕಟ್ಟೆ, ಹಾಲಾಡಿ, ಸೌಕೂರು, ನೀಲಾವರ ಮೇಳಗಳಲ್ಲಿ ಹಾಗೂ ಸುಮಾರು ಹತ್ತು ವರ್ಷಗಳ ಕಾಲ ಮಂದಾರ್ತಿ ಮೇಳದಲ್ಲಿ ಪುರುಷ ವೇಷಧಾರಿಯಾಗಿ ಕಲಾ ಸೇವೆಗೈದ ಇವರು ಅವಿವಾಹಿತರಾಗಿದ್ದರು. ತಾಯಿ ಹಾಗೂ ಅಪಾರ ಸಂಖ್ಯೆಯ ಕಲಾಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

 
 
 
 
 
 
 
 
 
 
 

Leave a Reply