ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ​ ​​ ಬಾವಿಗೆ ಹಾರಿ ಆತ್ಮಹತ್ಯೆ ​

ಉಡುಪಿ : ಫೇಲ್ ಆಗಿದ್ದಕ್ಕೆ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಂದೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿಯನ್ನು ರಕ್ಷಿತಾ (22) ಎಂದು ಗುರುತಿಸಲಾಗಿದ್ದು, ಈ​ಕೆ  ಉದ್ಯಾವರದ ಆಯುರ್ವೇದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.​ಎ .ಎಮ್.ಎಸ್ ಕಲಿಯುತ್ತಿದ್ದರು. ವಾರದ ಹಿಂದೆ ಅಂತಿಮ ವರ್ಷದ ಬಿ.​ಎ.ಎಮ್.ಎಸ್ ವ್ಯಾಸಂಗ ಮುಗಿಸಿ ಮನೆಗೆ ಬಂದಿದ್ದ ಇವರು ಬಿ.​ಎ.ಎಮ್.ಎಸ್ ಅಂತಿಮ ವರ್ಷದ ಫಲಿತಾಂಶವನ್ನು ಆನ್ ಲೈನ್ ನಲ್ಲಿ ನೋಡಿದ್ದಳು.

 ಅದರಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣಳಾಗಿ​ದ್ದಳು.  ಇದೇ ವಿಷಯಕ್ಕೆ ಮನನೊಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.​​

 
 
 
 
 
 
 
 
 
 
 

Leave a Reply