ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿಯನ್ನು ರಕ್ಷಿತಾ (22) ಎಂದು ಗುರುತಿಸಲಾಗಿದ್ದು, ಈಕೆ ಉದ್ಯಾವರದ ಆಯುರ್ವೇದ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎ .ಎಮ್.ಎಸ್ ಕಲಿಯುತ್ತಿದ್ದರು. ವಾರದ ಹಿಂದೆ ಅಂತಿಮ ವರ್ಷದ ಬಿ.ಎ.ಎಮ್.ಎಸ್ ವ್ಯಾಸಂಗ ಮುಗಿಸಿ ಮನೆಗೆ ಬಂದಿದ್ದ ಇವರು ಬಿ.ಎ.ಎಮ್.ಎಸ್ ಅಂತಿಮ ವರ್ಷದ ಫಲಿತಾಂಶವನ್ನು ಆನ್ ಲೈನ್ ನಲ್ಲಿ ನೋಡಿದ್ದಳು.
ಅದರಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣಳಾಗಿದ್ದಳು. ಇದೇ ವಿಷಯಕ್ಕೆ ಮನನೊಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.