ರಾಯಣ್ಣನ ಪ್ರತಿಮೆಯನ್ನು ಭಗ್ನಗೊಳಿಸಿರುವ ಘಟನೆ- ಸ್ವಾಮಿ ಚಿಕ್ಕಮಠ ಆಕ್ರೋಶ

ಬೆಳಗಾವಿಯ ಅನಗೋಳದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆಯನ್ನು ಭಗ್ನಗೊಳಿಸಿ, ವಿಕೃತಿ ಮರೆದಿರುವ ಘಟನೆಯನ್ನು ಖಂಡಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು  ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.  

*ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮಾಜಿಯ ಬಲಗೈ ಬಂಟನಾಗಿ, ಬ್ರಿಟಿಷರ ಪಾಲಿಗೆ ಸಿಂಹ ಸ್ವಪ್ನನಾಗಿ ಕಾಡಿದ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ ನಾಡಿನ ಹೆಮ್ಮೆಯ ಪುತ್ರ ರಾಯಣ್ಣನ ಪುತ್ಥಳಿಯನ್ನು ಭಗ್ನಗೊಳಿಸಿದ್ದನ್ನು ಖಂಡಿಸುತ್ತೇವೆ. ಯಾರೇ ಆಗಿರಲಿ. ಇಂತಹ ಕುಕೃತ್ಯ ನಡೆಸಿದವರ ವಿರುದ್ಧ  ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ.  

 
 
 
 
 
 
 
 
 
 
 

Leave a Reply