ಉಡುಪಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಉಡುಪಿ : ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಇಂದು ನಡೆದ ಜಿಲ್ಲಾಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಧ್ವಜಾರೋಹಣ ನೆರವೇರಿಸಿ ಬಳಿಕ ಗೌರವ ರಕ್ಷೆ ಸ್ವೀಕರಿಸಿದರು.

ಈ ವೇಳೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರಸಭಾಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕರಾವಳಿ ಕಾವಲು ಪಡೆ ಅಧೀಕ್ಷಕರಾದ ಚೇತನ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply