ಸಗ್ರಿ ನಾಗದೇವರ ಗುಡಿ ನಿರ್ಮಾಣ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ತು ಲಕ್ಷ ರೂ ಅನುದಾನ

ಉಡುಪಿಯ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೂತನವಾಗಿ ಶಿಲಾಮಯ ನಾಗದೇವರ ಗುಡಿ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಹತ್ತು ಲಕ್ಷ ರೂ ಅನುದಾನ ದೊರೆತಿದೆ . ಶ್ರೀ ಕ್ಷೇತ್ರಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬುಧವಾರ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ಸಗ್ರಿ ದೇವಳದ ಆಡಳಿತ ಮೊಕ್ತೇಸರ , ನಾಗಪಾತ್ರಿಗಳಾದ ಶ್ರೀ ಗೋಪಾಲಕೃಷ್ಣ ಸಾಮಗರಿಗೆ ದೇಣಿಗೆಯನ್ನು ಹಸ್ತಾಂತರಿಸಿದರು . ಲತಾ ಸಾಮಗ ,
ಸುಬ್ರಹ್ಮಣ್ಯ ಭಟ್ , ವಾಸುದೇವ ಭಟ್ ಪೆರಂಪಳ್ಳಿ , ಪ್ರದೀಪ್ ರಾವ್ ಮಟ್ಟು ಉಪಸ್ಥಿತರಿದ್ದರು .

 
 
 
 
 
 
 
 
 
 
 

Leave a Reply