ಏಪ್ರಿಲ್ 14 ,15 ,16 ರಂದು ಕುಂದಾಪುರದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತು , ಉಡುಪಿ ಜಿಲ್ಲೆಯ ಉಡುಪಿ ಜಿಲ್ಲಾ 15ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನದ ಸರ್ವಾಧ್ಯಕ್ಷರಾದ
ಪ್ರೊ. ಎ. ವಿ ನಾವುಡ ಅವರನ್ನು ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಅವರು ಮಂಗಳೂರಿನ ಅವರ ಸ್ವಗೃಹದಲ್ಲಿ ವಿದ್ಯುಕ್ತವಾಗಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಪ್ರೊ. ನಾವಡ ಅವರ ಪತ್ನಿ ಹಿರಿಯ ಲೇಖಕಿ
ಡಾ| ಗಾಯತ್ರಿ ನಾವಡ, ಗೌರವ ಕಾರ್ಯದರ್ಶಿಗಳಾದ ಸುಬ್ರಮಣ್ಯ ಶೆಟ್ಟಿ, ಕೋಶಾಧ್ಯಕ್ಷರಾದ ಮನೋಹರ ಪಿ, ಉಡುಪಿ ತಾಲೂಕು ಅಧ್ಯಕ್ಷರಾದ ರವಿರಾಜ್ ಎಚ್.ಪಿ, ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.